ಜಮ್ಮು-ಕಾಶ್ಮೀರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್ಕೌಂಟರ್ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಎನ್ಕೌಂಟರ್ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಎಎನ್ಐಗೆ ತಿಳಿಸಿದ್ದಾರೆ. ಎಲ್ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದ ನಂತರ ಎನ್ಕೌಂಟರ್ ನಡೆಯಿತು.
ಕುಪ್ವಾರಾ ಜಿಲ್ಲೆಯ ಎಲ್ಒಸಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನಗಳ ಬಗ್ಗೆ ಪೊಲೀಸರು ಮತ್ತು ಸೇನಾಪಡೆ ಯೋಧರು ನಿರ್ದಿಷ್ಟ ಮಾಹಿತಿ ಪಡೆದರು. ಭಯೋತ್ಪಾದಕರ ಇರುವಿಕೆಯನ್ನು ಖಚಿತಪಡಿಸಿಕೊಂಡು ಶರಣಾಗಲು ಸೂಚಿಸಿದಾಗ ಎನ್ ಕೌಂಟರ್ ನಡೆಯಿತು.
ಜೂನ್ 13 ರಂದು ಕುಪ್ವಾರದ ಎಲ್ಒಸಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು. ಕುಪ್ವಾರಾ ಜಿಲ್ಲೆಯ ದೋಬನಾರ್ ಮಚ್ಚಲ್ ಪ್ರದೇಶದಲ್ಲಿ (LOC) ಸೇನೆ ಮತ್ತು ಕುಪ್ವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ. ಶೋಧ ಇನ್ನೂ ಮುಂದುವರೆದಿದೆ ಎಂದು ಅದು ಟ್ವೀಟ್ ಮಾಡಿದೆ.
ಈ ತಿಂಗಳ ಆರಂಭದಲ್ಲಿ, ಜೂನ್ 2 ರಂದು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಉಗ್ರರನ್ನು ಕೊಲ್ಲಲಾಗಿದೆ. ರಜೌರಿ ಬಳಿಯ ದಸ್ಸಾಲ್ ಗುಜ್ರಾನ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ನಂತರ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆಯು ಎನ್ಕೌಂಟರ್ಗೆ ತಿರುಗಿತು ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…