BREAKING NEWS

ಬೆಂಗಳೂರು ಬಂದ್ ಕೈಬಿಡಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ

ಬೆಂಗಳೂರು : ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ಕೊಟ್ಟಿರುವ ಸಂಘಟನೆಗಳಿಗೆ ಬಂದ್ ಕೈ ಬಿಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.

ಬೆಂಗಳೂರು ಬಂದ್ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಂಘಟನೆಗಳಿಗೆ ಬಂದ್ ಮಾಡದಂತೆ ಮನವಿ ಮಾಡಿದ್ದೇನೆ. ಮತ್ತೊಂದು ಬಾರಿ ಮನವಿ ಮಾಡುತ್ತೇನೆ. ನೀವು ಪ್ರತಿಭಟನೆ ಮಾಡಲು ನಮ್ಮ ತಕರಾರು ಇಲ್ಲ. ಪ್ರತಿಭಟನೆ ಮಾಡೋದು ನಿಮ್ಮ ಹಕ್ಕು. ರಾಜ್ಯದ ಹಿತದೃಷ್ಟಿಯಿಂದ ಪ್ರತಿಭಟನೆ ಮಾಡಬಹುದು. ಆದರೆ ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು. ಸಾರ್ವಜನಿಕ ಆಸ್ತಿಗಳಿಗೆ ತೊಂದರೆ ಮಾಡಬಾರದು. ಜನರಿಗೆ ತೊಂದರೆ ಮಾಡಬಾರದು. ಕಾನೂನುಬಾಹಿರ ಚಟುವಟಿಕೆಗಳು ಆಗದಂತೆ ನೋಡಿಕೊಳ್ಳಬೇಕು ಎಂದರು.

ಬೆಂಗಳೂರಿನಲ್ಲಿ ಬಂದ್ ಮಾಡುವಾಗ ಸ್ವಲ್ಪ ಆತಂಕ ಇರುತ್ತದೆ. ಜನ ಸಮುದಾಯ ಓಡಾಡಲು ಸಮಸ್ಯೆ ಆಗುತ್ತದೆ. ಇದೆಲ್ಲವನ್ನೂ ಗಮನಕ್ಕೆ ತೆಗೆದುಕೊಂಡಿದ್ದೇವೆ. ಪೊಲೀಸ್ ಇಲಾಖೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ಅದೆಲ್ಲವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಧಿಕಾರಿಗಳ ಸಭೆ ಮಾಡಿಕೊಂಡು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬಂದ್ ಮಾಡುವುದರಿಂದ ನಮ್ಮ ಸಮಸ್ಯೆ ಬಗೆಹರಿಯುವುದಿಲ್ಲ. ನಮಗೆ ನೀರಿಲ್ಲದ ಕಾಲದಲ್ಲಿ ನೀರು ಬಿಡಿ ಎಂದು ಹೇಳುತ್ತಿದ್ದಾರೆ. ಕಾವೇರಿ ಬೋರ್ಡ್ ಅವರಿಗೆ ಒಂದು ಸಂದೇಶ ಕೊಟ್ಟ ಹಾಗೆ ಆಗುತ್ತದೆ ಎಂದು ಸಂಘಟನೆಗಳು ಬಂದ್ ಮಾಡುತ್ತಿದ್ದಾರೆ ಎನಿಸುತ್ತಿದೆ. ಸರ್ಕಾರ ಏನು ಕೆಲಸ ಮಾಡಬೇಕೋ ಅದನ್ನು ಮಾಡಿದೆ. ಬೋರ್ಡ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ವಕೀಲರ ತಂಡ ಎಫೆಕ್ಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಒಂದೊಂದು ಸಾರಿ ಕಾನೂನಿನ ವ್ಯವಸ್ಥೆ ಯಾವ ಕಡೆ ಹೋಗುತ್ತದೆ ಎಂದು ಹೇಳಲು ಆಗುವುದಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಬಂದ್‌ನಿಂದ ಜನ ಸಾಮಾನ್ಯರಿಗೆ, ಸಾರ್ವಜನಿಕರಿಗೆ ಸಮಸ್ಯೆ ಆಗುತ್ತದೆ. ಬಂದ್‌ನಿಂದ ನಾವೇನು ಸಾಧನೆ ಮಾಡುವುದಿಲ್ಲ. ಸರ್ಕಾರ ಮನವಿ ಮಾಡಿದ ಮೇಲೂ ಬಂದ್ ಮಾಡೋದು ಸಂಘಟನೆಗಳ ವಿವೇಚನೆಗೆ ಬಿಟ್ಟಿದ್ದು. ಬೆಂಗಳೂರು ಬಂದ್‌ಗೆ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಬಿಗಿ ಭದ್ರತೆ ಮಾಡಿಕೊಂಡಿದ್ದೇವೆ. ಕೆಎಸ್‌ಆರ್‌ಪಿ ಟೀಂ ರೆಡಿ ಇದೆ. ಅದನ್ನು ನಿಯೋಜನೆ ಮಾಡಲಾಗುತ್ತದೆ. ಎಲ್ಲೆಲ್ಲಿ ಅಗತ್ಯ ಇದೆಯೋ ಅಲ್ಲಿಗೆ ಪೊಲೀಸ್ ಫೋರ್ಸ್ ಹಾಕತ್ತೇವೆ ಎಂದು ಮಾಹಿತಿ ನೀಡಿದರು.

ಬಂದ್‌ಗೆ ಬಿಜೆಪಿ-ಜೆಡಿಎಸ್ ಬೆಂಬಲ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರಿಬ್ಬರು ಈಗ ತಾನೆ ಒಂದಾಗಿದ್ದಾರೆ. ದೋಸ್ತಿ ಮಾಡಿಕೊಂಡಿದ್ದಾರೆ. ಹಾಗಾಗಿ ಒಂದು ಪ್ರದರ್ಶನ ಮಾಡಬೇಕು ಅಲ್ಲವಾ. ಅದಕ್ಕೆ ಬಂದ್‌ಗೆ ಬೆಂಬಲ ಕೊಡುತ್ತಿದ್ದಾರೆ. ರಾಜ್ಯದ ಹಿತದೃಷ್ಟಿ ಅವರಿಗೂ ಇದೆ. ಬಿಜೆಪಿ-ಜೆಡಿಎಸ್ ಕೂಡಾ ಜವಾಬ್ದಾರಿಯುತವಾಗಿ ನಡೆದುಕೊಂಡರೆ ಒಳ್ಳೆಯದು ಎಂದು ತಿರುಗೇಟು ನೀಡಿದರು.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

11 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

13 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago