BREAKING NEWS

ಜಾತಿ ನಾಶವಾಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ , ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಮಲಾ ಹಂಪಾನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘the journey of life’ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾಮಾಜಿಕ‌, ಆರ್ಥಿಕ‌ ತಳಹದಿಯ ಮೇಲೆ ರೂಪುಗೊಳ್ಳದಿದ್ದರೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ ಎಂದಿದ್ದರು. ಹೀಗಾಗಿ ಸ್ವಾತಂತ್ರ್ಯದ ಉದ್ದೇಶ ಈಡೇರಬೇಕಾದರೆ ಸಮಾಜದಲ್ಲಿ ಅವಕಾಶ ಮತ್ತು ಸಂಪತ್ತು ಸಮಾನ ಹಂಚಿಕೆ ಆಗಿ

]ʼ;ಜಞಸಮ ಸಮಾಜ ನಿರ್ಮಾಣ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಜಾತಿ ನಾಶವಾಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಅಂತರ್ಜಾತಿ ವಿವಾಹ ಜಾತಿ ವಿನಾಶದ ಪ್ರಥಮ ಹೆಜ್ಜೆ. ನಮ್ಮ ಸಂವಿಧಾನ ಕೂಡ ನಮ್ಮದು ಜಾತ್ಯತೀತ ಸಮಾಜ ಎಂದು ಹೇಳಿದೆ. ಆ ಕಾಲದಲ್ಲೇ ಅಂತರ್ಜಾತಿ ವಿವಾಹವಾಗಿ ತಮ್ಮ ಮೂವರೂ ಮಕ್ಕಳನ್ನು ಅಂತರ್ಜಾತಿ ವಿವಾಹ ಮಾಡಿರುವ ಹಂಪ ನಾಗರಾಜಯ್ಯ ಮತ್ತು ಕಮಲಾ ಹಂಪನ ಅವರು ನಿಜಕ್ಕೂ ಆದರ್ಶ ದಂಪತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾತಿ ಯಾವುದಿದ್ದರೂ ನಾವು ಅಂತಿಮವಾಗಿ ಮನುಷ್ಯರಾಗಬೇಕು. ಮನುಷ್ಯ ಮನುಷ್ಯ ಪ್ರೀತಿಸುವುದೇ ಧರ್ಮ. ದ್ವೇಷಿಸುವುದು ಅದರ್ಮ. ಆದರೆ ಇಂದು ದ್ವೇಷವನ್ನು ಆರಾಧಿಸುವ ಸಮಾಜವನ್ನು ನಿರ್ಮಿಸುವ ಅಪಾಯಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪ್ರಜ್ಞಾವಂತರಾದ ನಾವೆಲ್ಲರೂ ತಡೆ ಹಾಕಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಹಂಪಾ ನಾಗರಜಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕೃತಿಗಳ ಕುರಿತು ಮಾತನಾಡಿದರು. ಲೇಖಕ ಜಿ.ಎನ್.ಮೋಹನ್ ಮತ್ತು ಕಮಲಾ ಹಂಪನಾ ವೇದಿಕೆಯಲ್ಲಿದ್ದರು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago