BREAKING NEWS

ಕಾಂಗ್ರೆಸ್​ ಪ್ರಣಾಳಿಕೆಗೆ ಬೆಂಕಿ ಹಚ್ಚಿದ ಈಶ್ವರಪ್ಪ

ಕಲಬುರಗಿ : ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಕೆಎಸ್ ಈಶ್ವರಪ್ಪ ಒಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್​ನ ಪ್ರಣಾಳಿಕೆಯ ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.ಚುನಾವಣಾ ಪ್ರಚಾರದ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಈಶ್ವರಪ್ಪ, ಇಂದು ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕಾಂಗ್ರೆಸ್​​ ಪ್ರಣಾಳಿಕೆ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು.

ಬಳಿಕ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್​​ನದ್ದು ರಾಷ್ಟ್ರ ದ್ರೋಹಿ ಪ್ರಣಾಳಿಕೆ. ಕಾಂಗ್ರೆಸ್​​ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್​ ಸರ್ಕಾರ PFI ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ದೇಶದಲ್ಲಿ PFI ಬ್ಯಾನ್ ಆಗಿದೆ ಎನ್ನುವುದೇ ಕಾಂಗ್ರೆಸ್​ಗೆ ಗೊತ್ತಿಲ್ಲ. ಬಿಜೆಪಿ ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಮಾಡಿದೆ. ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್​ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್​ ಸರ್ಕಾರ PFI ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ದೇಶದಲ್ಲಿ PFI ಬ್ಯಾನ್ ಆಗಿದೆ ಎನ್ನುವುದೇ ಕಾಂಗ್ರೆಸ್​ಗೆ ಗೊತ್ತಿಲ್ಲ. ಬಿಜೆಪಿ ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಮಾಡಿದೆ. ಆಂಜನೇಯನ ಬಾಲಕ್ಕೆ ರಾವಣ ಬೆಂಕಿಯಿಟ್ಟ. ಆ ರಾವಣನ ಅಧಿಕಾರವೇ ನಾಶವಾಯ್ತು. ಇದೀಗ ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್​ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.

ಭಜರಂಗದಳ ರಾಷ್ಟ್ರಪ್ರೇಮಿ ಸಂಘಟನೆ. ಕಾಂಗ್ರೆಸ್ ಪ್ರಣಾಳಿಕೆ ಮಹಮ್ಮದ್ ಅಲಿ ಜಿನ್ನಾ ಪ್ರಣಾಳಿಕೆಯಾಗಿದೆ. ಈ ಪ್ರಣಾಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕುತ್ತೇನೆ ಎಂದು ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದರು.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

6 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

6 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

6 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

18 hours ago