BREAKING NEWS

ಅಪ್ಪ-ಮಗನ ವಿರುದ್ಧ ಮತ್ತೊಮ್ಮೆ ಗುಡುಗಿದ ಈಶ್ವರಪ್ಪ !

ಶಿವಮೊಗ್ಗ : ಅಪ್ಪ ಮಗನ ಕಪಿಮುಷ್ಠಿಯಲ್ಲಿ ಸಿಲುಕಿರುವ ಬಿಜೆಪಿ ಪಕ್ಷ ವಿಲವಿಲ ಒದ್ದಾಡುತ್ತಿದೆ ಎಂದು ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ  ಈಶ್ವರಪ್ಪ ಕಿಡಿ ಕಾಡಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಯಾವುದೇ  ನಿರ್ಧಾರವಾಗಬೇಕಾದರೂ ಅಪ್ಪ ಮಕ್ಕಳೆ ತೀರ್ಮಾನಮಾಡಬೇಕು. ಇದರಿಂದ ಪಕ್ಷ ಹಾಗೂ ಪಕ್ಷದ ಕಾರ್ಯಕರ್ತರು ವಿಲವಿಲ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಈ ಬಗ್ಗೆ ಪಕ್ಷದ ಅನೇಕ ನಿಷ್ಠಾವಂತ ಕಾರ್ಯಕರ್ತರು ಅಸಮಧಾನ ಹೊರಹಾಕುತ್ತಿದ್ದಾರೆ. ಕೇಂದ್ರದ ವರಿಷ್ಠರು ಕೇವಲ ಯಡಿಯೂರಪ್ಪ ಒಬ್ಬರಿಂದಲೇ ಪಕ್ಷ ಸುಭದ್ರವಾಗಿರಲು ಸಾಧ್ಯ ಎಂದು ನಂಬಿ ಕೂತಿದ್ದಾರೆ. ರಾಜ್ಯದ ಲಿಂಗಾಯಿತರು ಯಡಿಯೂರಪ್ಪ ಅವರು ಹೇಳಿದಹಾಗೆ ಕೇಳುತ್ತಾರೆ ಎಂದು ನಂಬಿದ್ದಾರೆ ಅವರಿಗೆ ಮನವರಿಕೆ ಮಾಡಬೇಕಾಗಿದೆ ಎಂದು ತಿಳಿಸಿದರು.

 

ಹಿಂದುತ್ವವಾಧಿಗಳನ್ನು ತುಳಿಯುತ್ತಿದ್ದಾರೆ : ಪಕ್ಷದಲ್ಲಿ ಹಿಂದುತ್ವವಾಧಿಗಳನ್ನು ತುಳಿಯುವ ಕೆಲಸವಾಗುತ್ತಿದೆ. ಅದನ್ನು ಸ್ವತಃ ಯಡಿಯೂರಪ್ಪನವರೇ ಮಾಡುತ್ತಿದ್ದಾರೆ.

ನನ್ನನ್ನೂ  ಸೇರಿದಂತೆ ಸಿ.ಟಿ.ರವಿ, ಪ್ರತಾಪ್‌ ಸಿಂಹ, ಬಸವನಗೌಡ ಪಾಟೀಲ್‌ ಯತ್ನಾಳ್‌ ಅಂತಹ ಪಕ್ಕ ಹಿಂದುತ್ವ ವಾಧಿಗಳನ್ನು ತುಳಿಯುತ್ತಿದ್ದಾರೆ ಎಂದು ಈಶ್ವರಪ್ಪ ಅಸಮಧಾನ ವ್ಯಕ್ತಪಡಿಸಿದರು.

 

ಅಪ್ಪ ಮಕ್ಕಳಿಂದ ಪಕ್ಷವನ್ನು ಉಳಿಸಬೇಕು : ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಇಬ್ಬರೂ ಸೇರಿ ತಾಯಿಯಂತಃ ಬಿಜೆಪಿ ಪಕ್ಷವನ್ನು ಕತ್ತು ಹಿಸುಕಿ ಕೊಲ್ಲುವ ಕೆಲಸ ಮಾಡುತ್ತಿದ್ದಾರೆ.

ಅವರಿಂದ ಪಕ್ಷವನ್ನು ಮುಕ್ತ ಮಾಡಬೇಕು. ಹೀಗಾಗಿ ಹೀಗಾಗಿ ಪಕ್ಷದ ಅನೇಕ ನೊಂದ ಕಾರ್ಯಕರ್ತರ ಪರವಾಗಿ  ನಾನು ಸ್ವತಂತ್ರ್ಯವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

46 mins ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

52 mins ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

1 hour ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

1 hour ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

1 hour ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

2 hours ago