ಬೆಂಗಳೂರು: 2023–24ನೇ ಸಾಲಿನ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿರುವ ಮೂರು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರಗಳ (AI centre of excellence) ಪೈಕಿ ಒಂದು ಕೇಂದ್ರ ಕರ್ನಾಟಕಕ್ಕೆ ಲಭಿಸಲಿದೆ ಎಂದು ವರದಿಯಾಗಿದೆ.
2023-24ನೇ ಬಜೆಟ್ನಲ್ಲಿ ದೇಶದ ಮೂರು ಕಡೆಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಈ ಕೇಂದ್ರಗಳು ಉದ್ಯಮಿಗಳಿಗೆ ಸಂಶೋಧನೆ ಹಾಗೂ ಅಧ್ಯಯನ ನಡೆಸಲು ಹಾಗೂ ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ನೆರವು ನೀಡಲಿದೆ.
‘ಕರ್ನಾಟಕವು ಒಂದು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರವನ್ನು ನಿರೀಕ್ಷಿಸಬಹುದು, ಈಗಾಗಲೇ ರಾಜ್ಯ ಸರ್ಕಾರವು ಈಗಾಗಲೇ ಅದಕ್ಕೆ ಅರ್ಜಿ ಸಲ್ಲಿಸಿದ್ದು, ನಾನು ಈ ಬಗ್ಗೆ ಒಲವು ತೋರಿಸಿದ್ದೇನೆ‘ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಖಾತೆಯ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಅಲ್ಲದೇ ಡಬಲ್ ಎಂಜಿನ್ ಫ್ಯಾಕ್ಟರ್ ಕರ್ನಾಟಕಕ್ಕೆ ಲಾಭ ತಂದುಕೊಡುತ್ತಿದೆ ಎಂದು ಅವರು ಹೇಳಿದ್ದಾರೆ.
ಕಳೆದ ವಾರವಷ್ಟೇ ಧಾರವಾಡದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…