ಬೆಂಗಳೂರು: 2023–24ನೇ ಸಾಲಿನ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿರುವ ಮೂರು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರಗಳ (AI centre of excellence) ಪೈಕಿ ಒಂದು ಕೇಂದ್ರ ಕರ್ನಾಟಕಕ್ಕೆ ಲಭಿಸಲಿದೆ ಎಂದು ವರದಿಯಾಗಿದೆ.
2023-24ನೇ ಬಜೆಟ್ನಲ್ಲಿ ದೇಶದ ಮೂರು ಕಡೆಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಈ ಕೇಂದ್ರಗಳು ಉದ್ಯಮಿಗಳಿಗೆ ಸಂಶೋಧನೆ ಹಾಗೂ ಅಧ್ಯಯನ ನಡೆಸಲು ಹಾಗೂ ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ನೆರವು ನೀಡಲಿದೆ.
‘ಕರ್ನಾಟಕವು ಒಂದು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರವನ್ನು ನಿರೀಕ್ಷಿಸಬಹುದು, ಈಗಾಗಲೇ ರಾಜ್ಯ ಸರ್ಕಾರವು ಈಗಾಗಲೇ ಅದಕ್ಕೆ ಅರ್ಜಿ ಸಲ್ಲಿಸಿದ್ದು, ನಾನು ಈ ಬಗ್ಗೆ ಒಲವು ತೋರಿಸಿದ್ದೇನೆ‘ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಖಾತೆಯ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಅಲ್ಲದೇ ಡಬಲ್ ಎಂಜಿನ್ ಫ್ಯಾಕ್ಟರ್ ಕರ್ನಾಟಕಕ್ಕೆ ಲಾಭ ತಂದುಕೊಡುತ್ತಿದೆ ಎಂದು ಅವರು ಹೇಳಿದ್ದಾರೆ.
ಕಳೆದ ವಾರವಷ್ಟೇ ಧಾರವಾಡದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…