ಬೆಂಗಳೂರು: 2023–24ನೇ ಸಾಲಿನ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿರುವ ಮೂರು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರಗಳ (AI centre of excellence) ಪೈಕಿ ಒಂದು ಕೇಂದ್ರ ಕರ್ನಾಟಕಕ್ಕೆ ಲಭಿಸಲಿದೆ ಎಂದು ವರದಿಯಾಗಿದೆ.
2023-24ನೇ ಬಜೆಟ್ನಲ್ಲಿ ದೇಶದ ಮೂರು ಕಡೆಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಈ ಕೇಂದ್ರಗಳು ಉದ್ಯಮಿಗಳಿಗೆ ಸಂಶೋಧನೆ ಹಾಗೂ ಅಧ್ಯಯನ ನಡೆಸಲು ಹಾಗೂ ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ನೆರವು ನೀಡಲಿದೆ.
‘ಕರ್ನಾಟಕವು ಒಂದು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರವನ್ನು ನಿರೀಕ್ಷಿಸಬಹುದು, ಈಗಾಗಲೇ ರಾಜ್ಯ ಸರ್ಕಾರವು ಈಗಾಗಲೇ ಅದಕ್ಕೆ ಅರ್ಜಿ ಸಲ್ಲಿಸಿದ್ದು, ನಾನು ಈ ಬಗ್ಗೆ ಒಲವು ತೋರಿಸಿದ್ದೇನೆ‘ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಖಾತೆಯ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಅಲ್ಲದೇ ಡಬಲ್ ಎಂಜಿನ್ ಫ್ಯಾಕ್ಟರ್ ಕರ್ನಾಟಕಕ್ಕೆ ಲಾಭ ತಂದುಕೊಡುತ್ತಿದೆ ಎಂದು ಅವರು ಹೇಳಿದ್ದಾರೆ.
ಕಳೆದ ವಾರವಷ್ಟೇ ಧಾರವಾಡದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…