BREAKING NEWS

ಗನ್‌ಹೌಸ್‌ ವೃತ್ತದಲ್ಲಿ ರಾಜೇಂದ್ರ ಸ್ವಾಮಿಗಳ ಪುತ್ಥಳಿ ಸ್ಥಾಪನೆ: ರಾಜವಂಶಸ್ಥೆ ವಿರೋಧ

ಮೈಸೂರು: ನಿನ್ನೆ ರಾತ್ರೋ ರಾತ್ರಿ ನಗರದ ಗನ್‌ಹೌಸ್‌ ವೃತ್ತದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪ್ರತಿಮೆಯನ್ನು ಅನಾವಣ ಮಾಡಿರುವುದನ್ನು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಒಂದು ಪ್ರಬುದ್ಧ ಸಂಸ್ಥೆಯಿಂದ ಇಂತಹ ಕೆಲಸ ಸಮಂಜಸವಲ್ಲ. ಉದ್ದೇಶಿತ ಪ್ರತಿಮೆಗೆ ಸತತವಾಗಿ ವಿರೋಧ ತೋರಿದ ಸಾರ್ವಜನಿಕರಿಗೆ ಸ್ಪಂದಿಸಿಈ ಬಗ್ಗೆ ಪುನರ್‌ ವಿಮರ್ಶೆ ಮಾಡಲು ಮನವಿ ಕೂಡ ತಲುಪಿಸಿ ನನ್ನ ಬೆಂಬಲ ಸೂಚಿಸಿದ್ದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಈ ಬೆಳವಣಿಗೆಯನ್ನು ವಿರೋಧಿಸಿ ಅರಸು ಸಮಾಜದ ಮುಖಂಡ ಅಮರನಾಥ ರಾಜೇ ಅರಸ್‌ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವು, ರಾತ್ರಿ ಪುತ್ತಳಿ ಇಡುವ ಮೂಲಕ ಶಿವರಾತ್ರಿ ರಾಜೇಂದ್ರ ಸ್ವಾಮಿಗಳಿಗೆ ಹಾಗೂ ಜೆಎಸ್‌ಎಸ್‌ ಸಂಸ್ಥೆಗೆ ಅವಮಾನ ಮಾಡಿದ್ದಾರೆ. ಸುಪ್ರೀಮ್‌ ಕೋರ್ಟ್‌ ಆದೇಶ ಪಾಲನೆ ಮಾಡದೆ, ಯಾವುದೇ ದಾಖಲಾತಿ ಇಲ್ಲದೆ ಈ ಕೆಲಸ ಮಾಡಿರುವುದು ಇಡೀ ಮೈಸೂರು ಹಾಗೂ ಮೈಸೂರಿಗರಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದ್ದಾರೆ.

 

ಗನ್‌ಹೌಸ್‌ ವೃತತ್ತದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರ ಪುತ್ಥಳಿ ಸ್ಥಾಪಿಸಬೇಕು. ಇಲ್ಲವಾದಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಲಿ. ಇಲ್ಲವಾದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

1 hour ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

2 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

3 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

12 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

12 hours ago