ಮೈಸೂರು: ನಿನ್ನೆ ರಾತ್ರೋ ರಾತ್ರಿ ನಗರದ ಗನ್ಹೌಸ್ ವೃತ್ತದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪ್ರತಿಮೆಯನ್ನು ಅನಾವಣ ಮಾಡಿರುವುದನ್ನು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಒಂದು ಪ್ರಬುದ್ಧ ಸಂಸ್ಥೆಯಿಂದ ಇಂತಹ ಕೆಲಸ ಸಮಂಜಸವಲ್ಲ. ಉದ್ದೇಶಿತ ಪ್ರತಿಮೆಗೆ ಸತತವಾಗಿ ವಿರೋಧ ತೋರಿದ ಸಾರ್ವಜನಿಕರಿಗೆ ಸ್ಪಂದಿಸಿಈ ಬಗ್ಗೆ ಪುನರ್ ವಿಮರ್ಶೆ ಮಾಡಲು ಮನವಿ ಕೂಡ ತಲುಪಿಸಿ ನನ್ನ ಬೆಂಬಲ ಸೂಚಿಸಿದ್ದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಈ ಬೆಳವಣಿಗೆಯನ್ನು ವಿರೋಧಿಸಿ ಅರಸು ಸಮಾಜದ ಮುಖಂಡ ಅಮರನಾಥ ರಾಜೇ ಅರಸ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವು, ರಾತ್ರಿ ಪುತ್ತಳಿ ಇಡುವ ಮೂಲಕ ಶಿವರಾತ್ರಿ ರಾಜೇಂದ್ರ ಸ್ವಾಮಿಗಳಿಗೆ ಹಾಗೂ ಜೆಎಸ್ಎಸ್ ಸಂಸ್ಥೆಗೆ ಅವಮಾನ ಮಾಡಿದ್ದಾರೆ. ಸುಪ್ರೀಮ್ ಕೋರ್ಟ್ ಆದೇಶ ಪಾಲನೆ ಮಾಡದೆ, ಯಾವುದೇ ದಾಖಲಾತಿ ಇಲ್ಲದೆ ಈ ಕೆಲಸ ಮಾಡಿರುವುದು ಇಡೀ ಮೈಸೂರು ಹಾಗೂ ಮೈಸೂರಿಗರಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದ್ದಾರೆ.
ಗನ್ಹೌಸ್ ವೃತತ್ತದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪುತ್ಥಳಿ ಸ್ಥಾಪಿಸಬೇಕು. ಇಲ್ಲವಾದಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಲಿ. ಇಲ್ಲವಾದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…
ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…
ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…
ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…