ಮೈಸೂರು: ನಿನ್ನೆ ರಾತ್ರೋ ರಾತ್ರಿ ನಗರದ ಗನ್ಹೌಸ್ ವೃತ್ತದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪ್ರತಿಮೆಯನ್ನು ಅನಾವಣ ಮಾಡಿರುವುದನ್ನು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಒಂದು ಪ್ರಬುದ್ಧ ಸಂಸ್ಥೆಯಿಂದ ಇಂತಹ ಕೆಲಸ ಸಮಂಜಸವಲ್ಲ. ಉದ್ದೇಶಿತ ಪ್ರತಿಮೆಗೆ ಸತತವಾಗಿ ವಿರೋಧ ತೋರಿದ ಸಾರ್ವಜನಿಕರಿಗೆ ಸ್ಪಂದಿಸಿಈ ಬಗ್ಗೆ ಪುನರ್ ವಿಮರ್ಶೆ ಮಾಡಲು ಮನವಿ ಕೂಡ ತಲುಪಿಸಿ ನನ್ನ ಬೆಂಬಲ ಸೂಚಿಸಿದ್ದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಈ ಬೆಳವಣಿಗೆಯನ್ನು ವಿರೋಧಿಸಿ ಅರಸು ಸಮಾಜದ ಮುಖಂಡ ಅಮರನಾಥ ರಾಜೇ ಅರಸ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವು, ರಾತ್ರಿ ಪುತ್ತಳಿ ಇಡುವ ಮೂಲಕ ಶಿವರಾತ್ರಿ ರಾಜೇಂದ್ರ ಸ್ವಾಮಿಗಳಿಗೆ ಹಾಗೂ ಜೆಎಸ್ಎಸ್ ಸಂಸ್ಥೆಗೆ ಅವಮಾನ ಮಾಡಿದ್ದಾರೆ. ಸುಪ್ರೀಮ್ ಕೋರ್ಟ್ ಆದೇಶ ಪಾಲನೆ ಮಾಡದೆ, ಯಾವುದೇ ದಾಖಲಾತಿ ಇಲ್ಲದೆ ಈ ಕೆಲಸ ಮಾಡಿರುವುದು ಇಡೀ ಮೈಸೂರು ಹಾಗೂ ಮೈಸೂರಿಗರಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದ್ದಾರೆ.
ಗನ್ಹೌಸ್ ವೃತತ್ತದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪುತ್ಥಳಿ ಸ್ಥಾಪಿಸಬೇಕು. ಇಲ್ಲವಾದಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಲಿ. ಇಲ್ಲವಾದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…