BREAKING NEWS

ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆಗೆ ನೈತಿಕ ಸಮಿತಿ ಶಿಫಾರಸು

ನವದೆಹಲಿ : ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆ ಸದಸ್ಯತ್ವದಿಂದ ಉಚ್ಛಾಟಿಸುವಂತೆ ಲೋಕಸಭೆ ನೈತಿಕ ಸಮಿತಿಯು ಶಿಫಾರಸು ಮಾಡಿದೆ ಎಂದು ಸಂಸತ್‌ನ ಉನ್ನತ ಮೂಲಗಳು ಬುಧವಾರ ಹೇಳಿವೆ.

ಈ ವರದಿಯನ್ನು ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಲೋಕಸಭ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಾಗುತ್ತದೆ. ಚರ್ಚೆಯ ಬಳಿಕ ಪೂರಕ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮೊಯಿತ್ರಾ ಅವರು ಗುರುವಾರ ಸಮಿತಿ ಮುಂದೆ ಹಾಜರಾಗುವ ನಿರೀಕ್ಷೆ ಇದೆ.

ಮಹುವಾ ಮೊಯಿತ್ರಾ ಅವರು ಈ ಹಿಂದೆ ನೈತಿಕ ಸಮಿತಿಯ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೇ, ಸಂಸತ್‌ನ ನನ್ನ ಲಾಗಿನ್‌ ಐಡಿಯನ್ನು ಉದ್ಯಮಿ ಹೀರಾನಂದಾನಿಗೆ ಕೊಟ್ಟಿದ್ದೆ, ಎಂದು ತಪ್ಪೊಪ್ಪಿಕೊಂಡಿದ್ದರು.

ಮಹುವಾ ಮೊಯಿತ್ರಾ ವಿರುದ್ಧದ ತನಿಖೆಯನ್ನು ಲೋಕಪಾಲ ಸಂಸ್ಥೆಯು ಸಿಬಿಐಗೆ ಶಿಫಾರಸು ಮಾಡಿದೆ, ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬುಧವಾರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಆದರೆ, ಈ ವಿಚಾರದಲ್ಲಿ ಲೋಕಪಾಲ ಸಂಸ್ಥೆಯಾಗಲೀ, ಸಿಬಿಐನಿಂದಾಗಲೀ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ.

ನನ್ನ ದೂರಿನ ಮೇರೆಗೆ ಲೋಕಪಾಲ ಸಂಸ್ಥೆಯು ಲಂಚಕ್ಕಾಗಿ ದೇಶದ ಭದ್ರತೆಯನ್ನೇ ಅಡವಿಟ್ಟ ಮಹುವಾ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದೆ, ಎಂದು ದುಬೆ ಅವರು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದರು.

500 ಪುಟಗಳ ವರದಿಯನ್ನು ಸಂಸದೀಯ ನೈತಿಕ ಸಮಿತಿ ಸಲ್ಲಿಸಿದ್ದು, ಮೊಯಿತ್ರಾ ಅವರ ಕ್ರಮಗಳು ತೀವ್ರ ಆಕ್ಷೇಪಾರ್ಹ, ಅನೈತಿಕ, ಹೇಯ ಮತ್ತು ಕ್ರಿಮಿನಲ್ ಆಗಿವೆ ಎಂದು ಹೇಳಿದೆ. ಅವರ ವಿರುದ್ಧ ಕಠಿಣ ಶಿಕ್ಷೆಗೆ ಶಿಫಾರಸು ಮಾಡಿದೆ. ಇಡೀ ಪ್ರಕರಣದ ಕುರಿತು ಕಾನೂನಾತ್ಮಕ, ಸೂಕ್ಷ್ಮ, ಸಾಂಸ್ಥಿಕ ಹಾಗೂ ಸಮಯದ ಮಿತಿಯ ತನಿಖೆ ನಡೆಸಬೇಕು ಎಂದು ಕೂಡ ಸಲಹೆ ನೀಡಿದೆ.

ಸಂಸದೆ ಮಹುವಾ ಮೊಯಿತ್ರಾ ಅವರು, ಉದ್ಯಮಿ ದರ್ಶನ್‌ ಹೀರಾನಂದಾನಿ ಅವರಿಂದ ಕೋಟಿಗಟ್ಟಲೆ ಹಣ ಹಾಗೂ ದುಬಾರಿ ಬೆಲೆ ಬಾಳುವ ವಸ್ತುಗಳನ್ನು ಉಡುಗೊರೆಯಾಗಿ ಪಡೆದುಕೊಂಡು, ಅದಕ್ಕೆ ಪ್ರತಿಯಾಗಿ ಉದ್ಯಮಿ ಗೌತಮ್‌ ಅದಾನಿ ಸಮೂಹ ಕಂಪನಿಗಳ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ, ಎಂದು ದುಬೆ ಅವರು ಆರೋಪಿಸಿದ್ದರು. ಈ ಸಂಬಂಧ ಒಂದಷ್ಟು ದಾಖಲೆಗಳನ್ನೂ ಬಿಡುಗಡೆ ಮಾಡಿದ್ದರು.

lokesh

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

3 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

4 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

5 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

5 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

6 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

6 hours ago