BREAKING NEWS

ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆಗೆ ನೈತಿಕ ಸಮಿತಿ ಶಿಫಾರಸು

ನವದೆಹಲಿ : ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆ ಸದಸ್ಯತ್ವದಿಂದ ಉಚ್ಛಾಟಿಸುವಂತೆ ಲೋಕಸಭೆ ನೈತಿಕ ಸಮಿತಿಯು ಶಿಫಾರಸು ಮಾಡಿದೆ ಎಂದು ಸಂಸತ್‌ನ ಉನ್ನತ ಮೂಲಗಳು ಬುಧವಾರ ಹೇಳಿವೆ.

ಈ ವರದಿಯನ್ನು ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಲೋಕಸಭ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಾಗುತ್ತದೆ. ಚರ್ಚೆಯ ಬಳಿಕ ಪೂರಕ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮೊಯಿತ್ರಾ ಅವರು ಗುರುವಾರ ಸಮಿತಿ ಮುಂದೆ ಹಾಜರಾಗುವ ನಿರೀಕ್ಷೆ ಇದೆ.

ಮಹುವಾ ಮೊಯಿತ್ರಾ ಅವರು ಈ ಹಿಂದೆ ನೈತಿಕ ಸಮಿತಿಯ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೇ, ಸಂಸತ್‌ನ ನನ್ನ ಲಾಗಿನ್‌ ಐಡಿಯನ್ನು ಉದ್ಯಮಿ ಹೀರಾನಂದಾನಿಗೆ ಕೊಟ್ಟಿದ್ದೆ, ಎಂದು ತಪ್ಪೊಪ್ಪಿಕೊಂಡಿದ್ದರು.

ಮಹುವಾ ಮೊಯಿತ್ರಾ ವಿರುದ್ಧದ ತನಿಖೆಯನ್ನು ಲೋಕಪಾಲ ಸಂಸ್ಥೆಯು ಸಿಬಿಐಗೆ ಶಿಫಾರಸು ಮಾಡಿದೆ, ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬುಧವಾರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಆದರೆ, ಈ ವಿಚಾರದಲ್ಲಿ ಲೋಕಪಾಲ ಸಂಸ್ಥೆಯಾಗಲೀ, ಸಿಬಿಐನಿಂದಾಗಲೀ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ.

ನನ್ನ ದೂರಿನ ಮೇರೆಗೆ ಲೋಕಪಾಲ ಸಂಸ್ಥೆಯು ಲಂಚಕ್ಕಾಗಿ ದೇಶದ ಭದ್ರತೆಯನ್ನೇ ಅಡವಿಟ್ಟ ಮಹುವಾ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದೆ, ಎಂದು ದುಬೆ ಅವರು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದರು.

500 ಪುಟಗಳ ವರದಿಯನ್ನು ಸಂಸದೀಯ ನೈತಿಕ ಸಮಿತಿ ಸಲ್ಲಿಸಿದ್ದು, ಮೊಯಿತ್ರಾ ಅವರ ಕ್ರಮಗಳು ತೀವ್ರ ಆಕ್ಷೇಪಾರ್ಹ, ಅನೈತಿಕ, ಹೇಯ ಮತ್ತು ಕ್ರಿಮಿನಲ್ ಆಗಿವೆ ಎಂದು ಹೇಳಿದೆ. ಅವರ ವಿರುದ್ಧ ಕಠಿಣ ಶಿಕ್ಷೆಗೆ ಶಿಫಾರಸು ಮಾಡಿದೆ. ಇಡೀ ಪ್ರಕರಣದ ಕುರಿತು ಕಾನೂನಾತ್ಮಕ, ಸೂಕ್ಷ್ಮ, ಸಾಂಸ್ಥಿಕ ಹಾಗೂ ಸಮಯದ ಮಿತಿಯ ತನಿಖೆ ನಡೆಸಬೇಕು ಎಂದು ಕೂಡ ಸಲಹೆ ನೀಡಿದೆ.

ಸಂಸದೆ ಮಹುವಾ ಮೊಯಿತ್ರಾ ಅವರು, ಉದ್ಯಮಿ ದರ್ಶನ್‌ ಹೀರಾನಂದಾನಿ ಅವರಿಂದ ಕೋಟಿಗಟ್ಟಲೆ ಹಣ ಹಾಗೂ ದುಬಾರಿ ಬೆಲೆ ಬಾಳುವ ವಸ್ತುಗಳನ್ನು ಉಡುಗೊರೆಯಾಗಿ ಪಡೆದುಕೊಂಡು, ಅದಕ್ಕೆ ಪ್ರತಿಯಾಗಿ ಉದ್ಯಮಿ ಗೌತಮ್‌ ಅದಾನಿ ಸಮೂಹ ಕಂಪನಿಗಳ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ, ಎಂದು ದುಬೆ ಅವರು ಆರೋಪಿಸಿದ್ದರು. ಈ ಸಂಬಂಧ ಒಂದಷ್ಟು ದಾಖಲೆಗಳನ್ನೂ ಬಿಡುಗಡೆ ಮಾಡಿದ್ದರು.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

8 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

8 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

10 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

10 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

10 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

11 hours ago