ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್.ಭಗವಾನ್ ಹೇಳಿದ್ದಾರೆ.
ನಗರದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾ ಜಾರಿಗಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚಾತುರ್ವಣಗಳಲ್ಲಿ ಇಂದು ಕೇವಲ ಬ್ರಾಹ್ಮಣ ಹಾಗೂ ಶೂದ್ರ ಎರಡು ಮಾತ್ರ ಉಳಿದಿದೆ. ಯಾರೆಲ್ಲಾ ಜನಿವಾರ ಹಾಕುವುದಿಲ್ಲವೋ ಅವರೆಲ್ಲಾ ಶೂದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರು ಶೂದ್ರರೇ ಎಂದು ವ್ಯೆಂಗ್ಯವಾಡಿದ್ದಾರೆ.
ಇನ್ನು ಆರ್ಎಸ್ಎಸ್ ಸಂಘಟನೆ ಬಗ್ಗೆ ಮಾತನಾಡಿದ ಅವರು, ಆರ್ಎಸ್ಎಸ್ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ. ಅದರಂತೇ ದಲಿತ ಸಂಘರ್ಷ ಸಮಿತಿ ಯುವಜನರನ್ನು ತಯಾರು ಮಾಡಿ, ಸಮಾಜಕ್ಕೆ ಸತ್ಯತಿಳಿಸುವ ಕೆಲಸ ಮಾಡಬೇಕಿದೆ.
ವೈದಿಕ ಧರ್ಮವನ್ನು ಸಿಗಿದು ಹಾಕಿದ್ದರು ಕುವೆಂಪು:
ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ರಾಷ್ಟ್ರ ಕವಿ ಕುವೆಂಪು ಹಿಂದೂ ಹಾಗೂ ವೈದಿಕ ಧರ್ಮವನ್ನು ಸಿಗಿದು ತೋರಣ ಕಟ್ಟಿದ್ದಾರೆ. ಕುವೆಂಪು ಕೇವಲ ರಸ ಋಷಿ ಮಾತ್ರವಲ್ಲ ಅವರೊಬ್ಬ ಕ್ರಾಂತಿಕಾರಿ ಲೇಖಕ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಹೇಳಿದರು.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…