ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್.ಭಗವಾನ್ ಹೇಳಿದ್ದಾರೆ.
ನಗರದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾ ಜಾರಿಗಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚಾತುರ್ವಣಗಳಲ್ಲಿ ಇಂದು ಕೇವಲ ಬ್ರಾಹ್ಮಣ ಹಾಗೂ ಶೂದ್ರ ಎರಡು ಮಾತ್ರ ಉಳಿದಿದೆ. ಯಾರೆಲ್ಲಾ ಜನಿವಾರ ಹಾಕುವುದಿಲ್ಲವೋ ಅವರೆಲ್ಲಾ ಶೂದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರು ಶೂದ್ರರೇ ಎಂದು ವ್ಯೆಂಗ್ಯವಾಡಿದ್ದಾರೆ.
ಇನ್ನು ಆರ್ಎಸ್ಎಸ್ ಸಂಘಟನೆ ಬಗ್ಗೆ ಮಾತನಾಡಿದ ಅವರು, ಆರ್ಎಸ್ಎಸ್ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ. ಅದರಂತೇ ದಲಿತ ಸಂಘರ್ಷ ಸಮಿತಿ ಯುವಜನರನ್ನು ತಯಾರು ಮಾಡಿ, ಸಮಾಜಕ್ಕೆ ಸತ್ಯತಿಳಿಸುವ ಕೆಲಸ ಮಾಡಬೇಕಿದೆ.
ವೈದಿಕ ಧರ್ಮವನ್ನು ಸಿಗಿದು ಹಾಕಿದ್ದರು ಕುವೆಂಪು:
ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ರಾಷ್ಟ್ರ ಕವಿ ಕುವೆಂಪು ಹಿಂದೂ ಹಾಗೂ ವೈದಿಕ ಧರ್ಮವನ್ನು ಸಿಗಿದು ತೋರಣ ಕಟ್ಟಿದ್ದಾರೆ. ಕುವೆಂಪು ಕೇವಲ ರಸ ಋಷಿ ಮಾತ್ರವಲ್ಲ ಅವರೊಬ್ಬ ಕ್ರಾಂತಿಕಾರಿ ಲೇಖಕ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಹೇಳಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…