ಮೈಸೂರು : ಎಷ್ಟೇ ಕಷ್ಟವಾದರೂ ಎಲ್ಲರೂ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ವಿಶೇಷವಾಗಿ ವಕೀಲರು ಆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ.
ನಗರದ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶನಿವಾರ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ 10 ನೇ ರಾಜ್ಯಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನಕ್ಕೆ ಬದ್ಧರಾಗಿ ಎಲ್ಲರೂ ನಡೆದುಕೊಳ್ಳಬೇಕು. ಸಂವಿಧಾನ ಜಾರಿಯಾದ್ದರಿಂದ ಎಲ್ಲರೂ ಸಮಾನರು. ಹಾಗಾಗಿ ಅಂತಹ ಸಂವಿಧಾನವನ್ನು ಉಳಿಸಿಕೊಳ್ಳು ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.
ಈ ಹಿಂದೆ ರಾಜ ಪ್ರಭುತ್ವ ಇತ್ತು. ತಪ್ಪು ಮಾಡಿದರೆ ಶ್ರೀಮಂತರಿಗೆ ಒಂದು ಶಿಕ್ಷೆ ಬಡವರಿಗೆ ಒಂದು ಶಿಕ್ಷೆ ಎಂಬುದಿತ್ತು. ಆಗ ಜಾತಿ ವ್ಯವಸ್ಥೆ ಹೆಚ್ಚಿತ್ತು. ರಾಜ ಪ್ರಭುತ್ವದಲ್ಲಿ ಮನುವಾದ ಶಿಕ್ಷೆಯನ್ನು ತೀರ್ಮಾನ ಮಾಡುತ್ತಿತ್ತು. ಸಂವಿಧಾನ ಬಂದ ಮೇಲೆ ಪರಿಚ್ಛೇದ 14 ರಡಿಯಲ್ಲಿ ಎಲ್ಲರಿಗೂ ಒಂದೇ ಕಾನೂನು ಜಾರಿಯಾಯಿತು ಎಂದು ಹೇಳಿದರು.
ಸಮಾಜ ಮತ್ತು ಕಾನೂನಲ್ಲಿ ಯಾರೂ ಪೆದ್ದರೂ ಇಲ್ಲ. ಬುದ್ಧಿವಂತರೂ ಇಲ್ಲ. ಅವಕಾಶ ಸಿಕ್ಕಿದವರು ಮೇಲೆ ಹೋಗುತ್ತಾರೆ. ನಾನು ವಕೀಲನಾಗಿದ್ದವನು. ನಮ್ಮ ಅಪ್ಪ ವಕೀಲ ವೃತ್ತಿ ಬೇಡ ಎಂದು ವಿರೋಧಿಸುತ್ತಿದ್ದ. ವಕೀಲನಾದ ಮೇಲೆ ನಾನು ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದರು.
ಅಂಬೇಡ್ಕರ್ ದಲಿತ ಸಮುದಾಯದಲ್ಲಿ ಹುಟ್ಟಿ ಹಲವಾರು ನೋವು ಸಂಕಟಗಳನ್ನು ಅನುಭವಿಸಿದರು. ಅವರ ಓದಿಗೆ ಬರೋಡ ಮಹರಾಜರು ಮತ್ತು ಶಾಹು ಮಹರಾಜರು ಸಹಾಯ ಮಾಡಿದರು. ಹಾಗಾಗಿ ಅವರು ಉತ್ತಮ ವಿದ್ಯಾಭ್ಯಾಸ ಮಾಡಿದರು. ಅವರ ಮೇದಾವಿನಿಂದ ಅವರು ಎಲ್ಲರೂ ಒಪ್ಪಿಕೊಳ್ಳುವ ಸಂವಿಧಾನ ನೀಡಿದರು. ಆ ಸಂವಿಧಾನ ಎಲ್ಲರನ್ನು ಒಳಗೊಂಡಿದೆ. ಅದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೇಳಿದರು.
ವಕೀಲರಾದ ನೀವು ಬಡವರು, ಶಕ್ತಿ ಇಲ್ಲದವರ ಬಗ್ಗೆ ಸಿಂಪತಿ ತೋರಿ ಸಹಾಯ ಮಾಡುವ ಮನುಷ್ಯತ್ವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಅಸಮಾನತೆ ಇದೆ. ಹಾಗಾಗಿ ನೀವು ಅಸಮಾನತೆಯನ್ನು ತೊಡೆದುಹಾಕುವ ಕೆಲಸ ಮಾಡಬೇಕು ಎಂದು ಹೇಳಿದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…