BREAKING NEWS

ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಎಲ್ಲರೂ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು : ಎಷ್ಟೇ ಕಷ್ಟವಾದರೂ ಎಲ್ಲರೂ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ವಿಶೇಷವಾಗಿ ವಕೀಲರು ಆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ.

ನಗರದ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶನಿವಾರ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ 10 ನೇ ರಾಜ್ಯಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನಕ್ಕೆ ಬದ್ಧರಾಗಿ ಎಲ್ಲರೂ ನಡೆದುಕೊಳ್ಳಬೇಕು. ಸಂವಿಧಾನ ಜಾರಿಯಾದ್ದರಿಂದ ಎಲ್ಲರೂ ಸಮಾನರು. ಹಾಗಾಗಿ ಅಂತಹ ಸಂವಿಧಾನವನ್ನು ಉಳಿಸಿಕೊಳ್ಳು ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.

ಈ ಹಿಂದೆ ರಾಜ ಪ್ರಭುತ್ವ ಇತ್ತು. ತಪ್ಪು ಮಾಡಿದರೆ ಶ್ರೀಮಂತರಿಗೆ ಒಂದು ಶಿಕ್ಷೆ ಬಡವರಿಗೆ ಒಂದು ಶಿಕ್ಷೆ ಎಂಬುದಿತ್ತು. ಆಗ ಜಾತಿ ವ್ಯವಸ್ಥೆ ಹೆಚ್ಚಿತ್ತು. ರಾಜ ಪ್ರಭುತ್ವದಲ್ಲಿ ಮನುವಾದ ಶಿಕ್ಷೆಯನ್ನು ತೀರ್ಮಾನ ಮಾಡುತ್ತಿತ್ತು. ಸಂವಿಧಾನ ಬಂದ ಮೇಲೆ ಪರಿಚ್ಛೇದ 14 ರಡಿಯಲ್ಲಿ ಎಲ್ಲರಿಗೂ ಒಂದೇ ಕಾನೂನು ಜಾರಿಯಾಯಿತು ಎಂದು ಹೇಳಿದರು.

ಸಮಾಜ ಮತ್ತು ಕಾನೂನಲ್ಲಿ ಯಾರೂ ಪೆದ್ದರೂ ಇಲ್ಲ.‌ ಬುದ್ಧಿವಂತರೂ ಇಲ್ಲ.‌ ಅವಕಾಶ ಸಿಕ್ಕಿದವರು ಮೇಲೆ ಹೋಗುತ್ತಾರೆ. ನಾನು ವಕೀಲನಾಗಿದ್ದವನು. ನಮ್ಮ ಅಪ್ಪ ವಕೀಲ ವೃತ್ತಿ ಬೇಡ ಎಂದು ವಿರೋಧಿಸುತ್ತಿದ್ದ. ವಕೀಲನಾದ ಮೇಲೆ ನಾನು ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದರು.

ಅಂಬೇಡ್ಕರ್ ದಲಿತ ಸಮುದಾಯದಲ್ಲಿ ಹುಟ್ಟಿ ಹಲವಾರು ನೋವು ಸಂಕಟಗಳನ್ನು ಅನುಭವಿಸಿದರು. ಅವರ ಓದಿಗೆ ಬರೋಡ ಮಹರಾಜರು ಮತ್ತು ಶಾಹು ಮಹರಾಜರು ಸಹಾಯ ಮಾಡಿದರು. ಹಾಗಾಗಿ ಅವರು ಉತ್ತಮ ವಿದ್ಯಾಭ್ಯಾಸ ಮಾಡಿದರು. ಅವರ ಮೇದಾವಿನಿಂದ ಅವರು ಎಲ್ಲರೂ ಒಪ್ಪಿಕೊಳ್ಳುವ ಸಂವಿಧಾನ ನೀಡಿದರು. ಆ ಸಂವಿಧಾನ ಎಲ್ಲರನ್ನು ಒಳಗೊಂಡಿದೆ. ಅದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೇಳಿದರು.

ವಕೀಲರಾದ ನೀವು ಬಡವರು, ಶಕ್ತಿ ಇಲ್ಲದವರ ಬಗ್ಗೆ ಸಿಂಪತಿ ತೋರಿ ಸಹಾಯ ಮಾಡುವ ಮನುಷ್ಯತ್ವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಅಸಮಾನತೆ ಇದೆ. ಹಾಗಾಗಿ ನೀವು ಅಸಮಾನತೆಯನ್ನು ತೊಡೆದುಹಾಕುವ ಕೆಲಸ ಮಾಡಬೇಕು ಎಂದು ಹೇಳಿದರು.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago