BREAKING NEWS

ಇವಿಎಂ ದೋಷ: ಮತದಾನ ಮಾಡಲು ಸಾಧ್ಯವಾಗದೆ ವಾಪಸಾದ ಮಿಜೋರಾಂ ಮುಖ್ಯಮಂತ್ರಿ

ಐಝಾವ್ಲ್ : ‌ಇಂದು ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ವೇಳೆ ಇವಿಎಂ ದೋಷದಿಂದಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಂತುಂಗಾ ಅವರಿಗೆ ಮತ ಚಲಾಯಿಸಲು ಸಾಧ್ಯವಾಗಲಿಲ್ಲ.

ಮಿಜೋ ನ್ಯಾಷನಲ್‌ ಫ್ರಂಟ್‌ ಅಧ್ಯಕ್ಷರೂ ಆಗಿರುವ ಸಿಎಂ ಇಂದು ಬೆಳಿಗ್ಗೆ 19-ಐಝಾವ್ಲ್‌ ವೆಂಗ್ಲೈ- I ವೈಎಂಎ ಹಾಲ್‌ ಮತಗಟ್ಟೆಗೆ ಆಗಮಿಸಿದ್ದರು. ಈ ಮತಗಟ್ಟೆಯು ಐಝಾವ್ಲ್‌ ಉತ್ತರ- I I ವಿಧಾನಸಭಾ ಕ್ಷೇತ್ರದಡಿಯಲ್ಲಿ ಬರುತ್ತದೆ.

“ಇವಿಎಂ ಕೆಲಸ ಮಾಡದೇ ಇದ್ದುದರಿಂದ ನಾನು ಸ್ವಲ್ಪ ಹೊತ್ತು ಕಾದೆ. ಆದರೆ ಯಂತ್ರ ಸರಿಯಾಗದೇ ಇದ್ದುದರಿಂದ ನಾನು ನನ್ನ ಕ್ಷೇತ್ರಕ್ಕೆ ಭೇಟಿ ನೀಡಿ ಸಭೆಯೊಂದರ ನಂತರ ಮತದಾನ ಮಾಡುತ್ತೇನೆ,” ಎಂದು ಮುಖ್ಯಮಂತ್ರಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.

ತಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು. “ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ತಮ್ಮ ಪಕ್ಷ ಭಾಗವಾಗಿದ್ದರೂ ರಾಜ್ಯದಲ್ಲಿ ಬಿಜೆಪಿ ಜೊತೆಗೆ ಮೈತ್ರಿಯಿಲ್ಲ,” ಎಂದು ಅವರು ಹೇಳಿದರು.

ಝೊರಂತುಂಗ ಅವರು ಐಝ್ವಾಲ್‌ ಪೂರ್ವ- I ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

andolanait

Recent Posts

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

1 min ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

31 mins ago

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ : ಓರ್ವ ಬಂಧನ

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…

1 hour ago

ಯುವ ರೈತರ ಮದುವೆಯಾಗುವ ಯುವತಿಯರಿಗೆ 5 ಲಕ್ಷ ನೀಡಲಿ ; ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗೆ ಮನವಿ

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…

1 hour ago

ಕಾಲುಜಾರಿ ನೀರಿನಲ್ಲಿ ಮುಳುಗಿ ಯುವಕ ಸಾವು

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…

1 hour ago

ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್

ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…

1 hour ago