ಐಝಾವ್ಲ್ : ಇಂದು ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ವೇಳೆ ಇವಿಎಂ ದೋಷದಿಂದಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಂತುಂಗಾ ಅವರಿಗೆ ಮತ ಚಲಾಯಿಸಲು ಸಾಧ್ಯವಾಗಲಿಲ್ಲ.
ಮಿಜೋ ನ್ಯಾಷನಲ್ ಫ್ರಂಟ್ ಅಧ್ಯಕ್ಷರೂ ಆಗಿರುವ ಸಿಎಂ ಇಂದು ಬೆಳಿಗ್ಗೆ 19-ಐಝಾವ್ಲ್ ವೆಂಗ್ಲೈ- I ವೈಎಂಎ ಹಾಲ್ ಮತಗಟ್ಟೆಗೆ ಆಗಮಿಸಿದ್ದರು. ಈ ಮತಗಟ್ಟೆಯು ಐಝಾವ್ಲ್ ಉತ್ತರ- I I ವಿಧಾನಸಭಾ ಕ್ಷೇತ್ರದಡಿಯಲ್ಲಿ ಬರುತ್ತದೆ.
“ಇವಿಎಂ ಕೆಲಸ ಮಾಡದೇ ಇದ್ದುದರಿಂದ ನಾನು ಸ್ವಲ್ಪ ಹೊತ್ತು ಕಾದೆ. ಆದರೆ ಯಂತ್ರ ಸರಿಯಾಗದೇ ಇದ್ದುದರಿಂದ ನಾನು ನನ್ನ ಕ್ಷೇತ್ರಕ್ಕೆ ಭೇಟಿ ನೀಡಿ ಸಭೆಯೊಂದರ ನಂತರ ಮತದಾನ ಮಾಡುತ್ತೇನೆ,” ಎಂದು ಮುಖ್ಯಮಂತ್ರಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ತಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು. “ಕೇಂದ್ರದ ಎನ್ಡಿಎ ಸರ್ಕಾರದಲ್ಲಿ ತಮ್ಮ ಪಕ್ಷ ಭಾಗವಾಗಿದ್ದರೂ ರಾಜ್ಯದಲ್ಲಿ ಬಿಜೆಪಿ ಜೊತೆಗೆ ಮೈತ್ರಿಯಿಲ್ಲ,” ಎಂದು ಅವರು ಹೇಳಿದರು.
ಝೊರಂತುಂಗ ಅವರು ಐಝ್ವಾಲ್ ಪೂರ್ವ- I ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…