BREAKING NEWS

ಮಾಜಿ ಸಚಿವ ಗೋವಿಂದ ಕಾರಜೋಳಗೆ ಯಾವುದೇ ನಾಯಕತ್ವವಿಲ್ಲ : ಮಾಜಿ ಶಾಸಕ ಸಿ.ರಮೇಶ್ ಆಕ್ರೋಶ

  • ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ.

ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ ಮಾಜಿ ಶಾಸಕ ಸಿ.ರಮೇಶ್ ಆರೋಪಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು,ಗೋವಿಂದ ಕಾರಜೋಳ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ತಾವು ಹಾಗೂ ತಮ್ಮ ಪ್ರುತ್ರನಿಗೆ ಟಿಕೇಟ್ ಪಡೆದು ಸೋಲು ಕಂಡರು, ಕಳೆದ ಚುನಾವಣೆಯಲ್ಲಿ ಪಕ್ಷ ಸೋಲು ಕಾಣಲು ಗೋವಿಂದ ಕಾರಜೋಳ ಕೂಡ ಒಬ್ಬರಾಗಿದ್ದಾರೆ. ಮಾದಿಗ ಸಮುದಾಯದ ಯಾವುದೇ ಮುಖಂಡರಿಗೆ ಸ್ಥಾನಮಾನ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.

ಹಳೆ ಮೈಸೂರು ಭಾಗದಲ್ಲಿ ಭಾರತೀಯ ಜನತಾ ಪಕ್ಷದಿಂದ ಮಾದಿಗ ಜನಾಂಗಕ್ಕೆ ಟಿಕೇಟ್ ನೀಡಿಲ್ಲ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ 15ರಿಂದ 20ಸಾವಿರ ಮತದಾರರಿದ್ದು,ಇದುವರೆಗೂ ಒಬ್ಬರು ಕೂಡ ಸಂಸದರಾಗಿಲ್ಲ.

ಆದರಿಂದ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಎಡಗೈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯನ್ನು ನೇಮಕ ಮಾಡುವುದರ ಮೂಲಕ ಮಾದಿಗ ಜನಾಂಗಕ್ಕೆ ರಾಜಕೀಯವಾಗಿ ನ್ಯಾಯ ಒದಗಿಸಬೇಕು, ನಾನು ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡಲು ಅರ್ಹನಾಗಿದ್ದು ಮಾದಿಗ ಜನಾಂಗಕ್ಕೆ ನೀಡಿದರೆ ತಮ್ಮನ್ನು ಪರಿಗಣಿಸಬೇಕೆಂದು ತಿಳಿಸಿದರು.

ಶ್ರೀನಿವಾಸ ಪ್ರಸಾದ್ ಅವರ ಮೂರ್ನಾಲ್ಕು ಬಾರಿ ಸಂಸದರಾಗಿದ್ದಾರೆ. ಬರೀ ಅವರ ಕುಟುಂಬಕ್ಕೆ ಆದ್ಯತೆ ನೀಡುವುದು ಸರಿಯಲ್ಲ ಈ ಬಾರಿ ಎಡಗೈ ಸಮುದಾಯಕ್ಕೆ ಆದ್ಯತೆ ನೀಡುವ ಮೂಲಕ ಹೊಲೆ ಮಾದಿಗ ಸಮಾಜದವರು ಒಂದಾಗಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

48 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

58 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago