BREAKING NEWS

ಮಾಜಿ ಸಚಿವ ಗೋವಿಂದ ಕಾರಜೋಳಗೆ ಯಾವುದೇ ನಾಯಕತ್ವವಿಲ್ಲ : ಮಾಜಿ ಶಾಸಕ ಸಿ.ರಮೇಶ್ ಆಕ್ರೋಶ

  • ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ.

ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ ಮಾಜಿ ಶಾಸಕ ಸಿ.ರಮೇಶ್ ಆರೋಪಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು,ಗೋವಿಂದ ಕಾರಜೋಳ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ತಾವು ಹಾಗೂ ತಮ್ಮ ಪ್ರುತ್ರನಿಗೆ ಟಿಕೇಟ್ ಪಡೆದು ಸೋಲು ಕಂಡರು, ಕಳೆದ ಚುನಾವಣೆಯಲ್ಲಿ ಪಕ್ಷ ಸೋಲು ಕಾಣಲು ಗೋವಿಂದ ಕಾರಜೋಳ ಕೂಡ ಒಬ್ಬರಾಗಿದ್ದಾರೆ. ಮಾದಿಗ ಸಮುದಾಯದ ಯಾವುದೇ ಮುಖಂಡರಿಗೆ ಸ್ಥಾನಮಾನ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.

ಹಳೆ ಮೈಸೂರು ಭಾಗದಲ್ಲಿ ಭಾರತೀಯ ಜನತಾ ಪಕ್ಷದಿಂದ ಮಾದಿಗ ಜನಾಂಗಕ್ಕೆ ಟಿಕೇಟ್ ನೀಡಿಲ್ಲ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ 15ರಿಂದ 20ಸಾವಿರ ಮತದಾರರಿದ್ದು,ಇದುವರೆಗೂ ಒಬ್ಬರು ಕೂಡ ಸಂಸದರಾಗಿಲ್ಲ.

ಆದರಿಂದ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಎಡಗೈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯನ್ನು ನೇಮಕ ಮಾಡುವುದರ ಮೂಲಕ ಮಾದಿಗ ಜನಾಂಗಕ್ಕೆ ರಾಜಕೀಯವಾಗಿ ನ್ಯಾಯ ಒದಗಿಸಬೇಕು, ನಾನು ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡಲು ಅರ್ಹನಾಗಿದ್ದು ಮಾದಿಗ ಜನಾಂಗಕ್ಕೆ ನೀಡಿದರೆ ತಮ್ಮನ್ನು ಪರಿಗಣಿಸಬೇಕೆಂದು ತಿಳಿಸಿದರು.

ಶ್ರೀನಿವಾಸ ಪ್ರಸಾದ್ ಅವರ ಮೂರ್ನಾಲ್ಕು ಬಾರಿ ಸಂಸದರಾಗಿದ್ದಾರೆ. ಬರೀ ಅವರ ಕುಟುಂಬಕ್ಕೆ ಆದ್ಯತೆ ನೀಡುವುದು ಸರಿಯಲ್ಲ ಈ ಬಾರಿ ಎಡಗೈ ಸಮುದಾಯಕ್ಕೆ ಆದ್ಯತೆ ನೀಡುವ ಮೂಲಕ ಹೊಲೆ ಮಾದಿಗ ಸಮಾಜದವರು ಒಂದಾಗಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು

andolana

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago