BREAKING NEWS

ಮಾಜಿ ಸಚಿವ ಗೋವಿಂದ ಕಾರಜೋಳಗೆ ಯಾವುದೇ ನಾಯಕತ್ವವಿಲ್ಲ : ಮಾಜಿ ಶಾಸಕ ಸಿ.ರಮೇಶ್ ಆಕ್ರೋಶ

  • ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ.

ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ ಮಾಜಿ ಶಾಸಕ ಸಿ.ರಮೇಶ್ ಆರೋಪಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು,ಗೋವಿಂದ ಕಾರಜೋಳ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ತಾವು ಹಾಗೂ ತಮ್ಮ ಪ್ರುತ್ರನಿಗೆ ಟಿಕೇಟ್ ಪಡೆದು ಸೋಲು ಕಂಡರು, ಕಳೆದ ಚುನಾವಣೆಯಲ್ಲಿ ಪಕ್ಷ ಸೋಲು ಕಾಣಲು ಗೋವಿಂದ ಕಾರಜೋಳ ಕೂಡ ಒಬ್ಬರಾಗಿದ್ದಾರೆ. ಮಾದಿಗ ಸಮುದಾಯದ ಯಾವುದೇ ಮುಖಂಡರಿಗೆ ಸ್ಥಾನಮಾನ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.

ಹಳೆ ಮೈಸೂರು ಭಾಗದಲ್ಲಿ ಭಾರತೀಯ ಜನತಾ ಪಕ್ಷದಿಂದ ಮಾದಿಗ ಜನಾಂಗಕ್ಕೆ ಟಿಕೇಟ್ ನೀಡಿಲ್ಲ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ 15ರಿಂದ 20ಸಾವಿರ ಮತದಾರರಿದ್ದು,ಇದುವರೆಗೂ ಒಬ್ಬರು ಕೂಡ ಸಂಸದರಾಗಿಲ್ಲ.

ಆದರಿಂದ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಎಡಗೈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯನ್ನು ನೇಮಕ ಮಾಡುವುದರ ಮೂಲಕ ಮಾದಿಗ ಜನಾಂಗಕ್ಕೆ ರಾಜಕೀಯವಾಗಿ ನ್ಯಾಯ ಒದಗಿಸಬೇಕು, ನಾನು ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡಲು ಅರ್ಹನಾಗಿದ್ದು ಮಾದಿಗ ಜನಾಂಗಕ್ಕೆ ನೀಡಿದರೆ ತಮ್ಮನ್ನು ಪರಿಗಣಿಸಬೇಕೆಂದು ತಿಳಿಸಿದರು.

ಶ್ರೀನಿವಾಸ ಪ್ರಸಾದ್ ಅವರ ಮೂರ್ನಾಲ್ಕು ಬಾರಿ ಸಂಸದರಾಗಿದ್ದಾರೆ. ಬರೀ ಅವರ ಕುಟುಂಬಕ್ಕೆ ಆದ್ಯತೆ ನೀಡುವುದು ಸರಿಯಲ್ಲ ಈ ಬಾರಿ ಎಡಗೈ ಸಮುದಾಯಕ್ಕೆ ಆದ್ಯತೆ ನೀಡುವ ಮೂಲಕ ಹೊಲೆ ಮಾದಿಗ ಸಮಾಜದವರು ಒಂದಾಗಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು

andolana

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

4 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

5 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

5 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

6 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

9 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

10 hours ago