ಕಳೆದ ವಾರವಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಾಕಿ ಜಿಎಸ್ಟಿ ನೀಡುವಂತೆ ಪತ್ರ ಬರೆದಿದ್ದರು. ಇದೀಗ ರಾಜ್ಯ ಸಭೆಯಲ್ಲಿ ಇಂದು ( ಡಿಸೆಂಬರ್ 12 ) ಮಾತನಾಡಿದ ನಿರ್ಮಲಾ ಸೀತಾರಾಮನ್ ಯಾವುದೇ ರಾಜ್ಯದ ಜಿಎಸ್ಟಿ ಬಾಕಿ ಉಳಿದಿಲ್ಲ ಎಂದು ಉತ್ತರ ನೀಡಿದ್ದಾರೆ.
ಕೇಂದ್ರದಿಂದ ಜಿಎಸ್ಟಿ ಬಾಕಿ ಉಳಿದಿದೆ ಎಂಬ ಹೇಳಿಕೆಗಳು ಸರಿಯಲ್ಲ, ರಾಜ್ಯಗಳು ಎಜಿ ವರದಿಯನ್ನು ಸಲ್ಲಿಸದೇ ಇರುವುದು ತಪ್ಪು ಎಂದರು. “ಅಕೌಂಟೆಂಟ್ ಜನರಲ್ನ ಪ್ರಮಾಣೀಕರಣ ಕಡ್ಡಾಯವಾಗಿದೆ ಎಂಬುದನ್ನು ರಾಜ್ಯಗಳು ಅರ್ಥ ಮಾಡಿಕೊಳ್ಳುವುದು ಅತಿಮುಖ್ಯ. ಎಜಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸದಿದ್ದರೆ ಜಿಎಸ್ಟಿ ಬಾಕಿ ಬಿಡುಗಡೆ ಸಾಧ್ಯವಿಲ್ಲ, ಕೆಲ ರಾಜ್ಯಗಳು ಎಜಿ ಪ್ರಮಾಣ ಪತ್ರ ಸಲ್ಲಿಸಿದ ನಂತರವೂ ಅಂತಿಮ ಬಾಕಿ ಬಿಡುಗಡೆಯನ್ನು ಸ್ವಲ್ಪ ತಡೆಯುವಂತೆ ಮನವಿ ಮಾಡುತ್ತವೆ” ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ತೃಣಮೂಲ ಕಾಂಗ್ರೆಸ್ ಸದಸ್ಯ ಸಾಕೇತ್ ಗೋಖಲೆ ಪಶ್ಚಿಮ ಬಂಗಾಳದ ಜಿಎಸ್ಟಿ ಬಾಕಿ ಕುರಿತು ಕೇಳಿದ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಕರ್ನಾಟಕ ಹೊತರುಪಡಿಸಿ ಉಳಿದ ಯಾವುದೇ ರಾಜ್ಯಗಳು ಎಜಿ ಪ್ರಮಾಣಪತ್ರವನ್ನು ನೀಡಿಲ್ಲ ಎಂದು ತಿಳಿಸಿದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…