BREAKING NEWS

ಯಾವುದೇ ರಾಜ್ಯಗಳ ಜಿಎಸ್‌ಟಿ ಬಾಕಿ ಉಳಿದಿಲ್ಲ ಎಂದ ನಿರ್ಮಲಾ ಸೀತಾರಾಮನ್‌

ಕಳೆದ ವಾರವಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಬಾಕಿ ಜಿಎಸ್‌ಟಿ ನೀಡುವಂತೆ ಪತ್ರ ಬರೆದಿದ್ದರು. ಇದೀಗ ರಾಜ್ಯ ಸಭೆಯಲ್ಲಿ ಇಂದು ( ಡಿಸೆಂಬರ್‌ 12 ) ಮಾತನಾಡಿದ ನಿರ್ಮಲಾ ಸೀತಾರಾಮನ್‌ ಯಾವುದೇ ರಾಜ್ಯದ ಜಿಎಸ್‌ಟಿ ಬಾಕಿ ಉಳಿದಿಲ್ಲ ಎಂದು ಉತ್ತರ ನೀಡಿದ್ದಾರೆ.

ಕೇಂದ್ರದಿಂದ ಜಿಎಸ್‌ಟಿ ಬಾಕಿ ಉಳಿದಿದೆ ಎಂಬ ಹೇಳಿಕೆಗಳು ಸರಿಯಲ್ಲ, ರಾಜ್ಯಗಳು ಎಜಿ ವರದಿಯನ್ನು ಸಲ್ಲಿಸದೇ ಇರುವುದು ತಪ್ಪು ಎಂದರು. “ಅಕೌಂಟೆಂಟ್‌ ಜನರಲ್‌ನ ಪ್ರಮಾಣೀಕರಣ ಕಡ್ಡಾಯವಾಗಿದೆ ಎಂಬುದನ್ನು ರಾಜ್ಯಗಳು ಅರ್ಥ ಮಾಡಿಕೊಳ್ಳುವುದು ಅತಿಮುಖ್ಯ. ಎಜಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸದಿದ್ದರೆ ಜಿಎಸ್‌ಟಿ ಬಾಕಿ ಬಿಡುಗಡೆ ಸಾಧ್ಯವಿಲ್ಲ, ಕೆಲ ರಾಜ್ಯಗಳು ಎಜಿ ಪ್ರಮಾಣ ಪತ್ರ ಸಲ್ಲಿಸಿದ ನಂತರವೂ ಅಂತಿಮ ಬಾಕಿ ಬಿಡುಗಡೆಯನ್ನು ಸ್ವಲ್ಪ ತಡೆಯುವಂತೆ ಮನವಿ ಮಾಡುತ್ತವೆ” ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ತೃಣಮೂಲ ಕಾಂಗ್ರೆಸ್‌ ಸದಸ್ಯ ಸಾಕೇತ್‌ ಗೋಖಲೆ ಪಶ್ಚಿಮ ಬಂಗಾಳದ ಜಿಎಸ್‌ಟಿ ಬಾಕಿ ಕುರಿತು ಕೇಳಿದ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್‌ ಉತ್ತರಿಸಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಕರ್ನಾಟಕ ಹೊತರುಪಡಿಸಿ ಉಳಿದ ಯಾವುದೇ ರಾಜ್ಯಗಳು ಎಜಿ ಪ್ರಮಾಣಪತ್ರವನ್ನು ನೀಡಿಲ್ಲ ಎಂದು ತಿಳಿಸಿದರು.

andolana

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

7 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

7 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

8 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

8 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

8 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

8 hours ago