ಕಳೆದ ವಾರವಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಾಕಿ ಜಿಎಸ್ಟಿ ನೀಡುವಂತೆ ಪತ್ರ ಬರೆದಿದ್ದರು. ಇದೀಗ ರಾಜ್ಯ ಸಭೆಯಲ್ಲಿ ಇಂದು ( ಡಿಸೆಂಬರ್ 12 ) ಮಾತನಾಡಿದ ನಿರ್ಮಲಾ ಸೀತಾರಾಮನ್ ಯಾವುದೇ ರಾಜ್ಯದ ಜಿಎಸ್ಟಿ ಬಾಕಿ ಉಳಿದಿಲ್ಲ ಎಂದು ಉತ್ತರ ನೀಡಿದ್ದಾರೆ.
ಕೇಂದ್ರದಿಂದ ಜಿಎಸ್ಟಿ ಬಾಕಿ ಉಳಿದಿದೆ ಎಂಬ ಹೇಳಿಕೆಗಳು ಸರಿಯಲ್ಲ, ರಾಜ್ಯಗಳು ಎಜಿ ವರದಿಯನ್ನು ಸಲ್ಲಿಸದೇ ಇರುವುದು ತಪ್ಪು ಎಂದರು. “ಅಕೌಂಟೆಂಟ್ ಜನರಲ್ನ ಪ್ರಮಾಣೀಕರಣ ಕಡ್ಡಾಯವಾಗಿದೆ ಎಂಬುದನ್ನು ರಾಜ್ಯಗಳು ಅರ್ಥ ಮಾಡಿಕೊಳ್ಳುವುದು ಅತಿಮುಖ್ಯ. ಎಜಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸದಿದ್ದರೆ ಜಿಎಸ್ಟಿ ಬಾಕಿ ಬಿಡುಗಡೆ ಸಾಧ್ಯವಿಲ್ಲ, ಕೆಲ ರಾಜ್ಯಗಳು ಎಜಿ ಪ್ರಮಾಣ ಪತ್ರ ಸಲ್ಲಿಸಿದ ನಂತರವೂ ಅಂತಿಮ ಬಾಕಿ ಬಿಡುಗಡೆಯನ್ನು ಸ್ವಲ್ಪ ತಡೆಯುವಂತೆ ಮನವಿ ಮಾಡುತ್ತವೆ” ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ತೃಣಮೂಲ ಕಾಂಗ್ರೆಸ್ ಸದಸ್ಯ ಸಾಕೇತ್ ಗೋಖಲೆ ಪಶ್ಚಿಮ ಬಂಗಾಳದ ಜಿಎಸ್ಟಿ ಬಾಕಿ ಕುರಿತು ಕೇಳಿದ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಕರ್ನಾಟಕ ಹೊತರುಪಡಿಸಿ ಉಳಿದ ಯಾವುದೇ ರಾಜ್ಯಗಳು ಎಜಿ ಪ್ರಮಾಣಪತ್ರವನ್ನು ನೀಡಿಲ್ಲ ಎಂದು ತಿಳಿಸಿದರು.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…