BREAKING NEWS

ಯಾವುದೇ ರಾಜ್ಯಗಳ ಜಿಎಸ್‌ಟಿ ಬಾಕಿ ಉಳಿದಿಲ್ಲ ಎಂದ ನಿರ್ಮಲಾ ಸೀತಾರಾಮನ್‌

ಕಳೆದ ವಾರವಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಬಾಕಿ ಜಿಎಸ್‌ಟಿ ನೀಡುವಂತೆ ಪತ್ರ ಬರೆದಿದ್ದರು. ಇದೀಗ ರಾಜ್ಯ ಸಭೆಯಲ್ಲಿ ಇಂದು ( ಡಿಸೆಂಬರ್‌ 12 ) ಮಾತನಾಡಿದ ನಿರ್ಮಲಾ ಸೀತಾರಾಮನ್‌ ಯಾವುದೇ ರಾಜ್ಯದ ಜಿಎಸ್‌ಟಿ ಬಾಕಿ ಉಳಿದಿಲ್ಲ ಎಂದು ಉತ್ತರ ನೀಡಿದ್ದಾರೆ.

ಕೇಂದ್ರದಿಂದ ಜಿಎಸ್‌ಟಿ ಬಾಕಿ ಉಳಿದಿದೆ ಎಂಬ ಹೇಳಿಕೆಗಳು ಸರಿಯಲ್ಲ, ರಾಜ್ಯಗಳು ಎಜಿ ವರದಿಯನ್ನು ಸಲ್ಲಿಸದೇ ಇರುವುದು ತಪ್ಪು ಎಂದರು. “ಅಕೌಂಟೆಂಟ್‌ ಜನರಲ್‌ನ ಪ್ರಮಾಣೀಕರಣ ಕಡ್ಡಾಯವಾಗಿದೆ ಎಂಬುದನ್ನು ರಾಜ್ಯಗಳು ಅರ್ಥ ಮಾಡಿಕೊಳ್ಳುವುದು ಅತಿಮುಖ್ಯ. ಎಜಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸದಿದ್ದರೆ ಜಿಎಸ್‌ಟಿ ಬಾಕಿ ಬಿಡುಗಡೆ ಸಾಧ್ಯವಿಲ್ಲ, ಕೆಲ ರಾಜ್ಯಗಳು ಎಜಿ ಪ್ರಮಾಣ ಪತ್ರ ಸಲ್ಲಿಸಿದ ನಂತರವೂ ಅಂತಿಮ ಬಾಕಿ ಬಿಡುಗಡೆಯನ್ನು ಸ್ವಲ್ಪ ತಡೆಯುವಂತೆ ಮನವಿ ಮಾಡುತ್ತವೆ” ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ತೃಣಮೂಲ ಕಾಂಗ್ರೆಸ್‌ ಸದಸ್ಯ ಸಾಕೇತ್‌ ಗೋಖಲೆ ಪಶ್ಚಿಮ ಬಂಗಾಳದ ಜಿಎಸ್‌ಟಿ ಬಾಕಿ ಕುರಿತು ಕೇಳಿದ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್‌ ಉತ್ತರಿಸಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಕರ್ನಾಟಕ ಹೊತರುಪಡಿಸಿ ಉಳಿದ ಯಾವುದೇ ರಾಜ್ಯಗಳು ಎಜಿ ಪ್ರಮಾಣಪತ್ರವನ್ನು ನೀಡಿಲ್ಲ ಎಂದು ತಿಳಿಸಿದರು.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago