ಕಳೆದ ವಾರವಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಾಕಿ ಜಿಎಸ್ಟಿ ನೀಡುವಂತೆ ಪತ್ರ ಬರೆದಿದ್ದರು. ಇದೀಗ ರಾಜ್ಯ ಸಭೆಯಲ್ಲಿ ಇಂದು ( ಡಿಸೆಂಬರ್ 12 ) ಮಾತನಾಡಿದ ನಿರ್ಮಲಾ ಸೀತಾರಾಮನ್ ಯಾವುದೇ ರಾಜ್ಯದ ಜಿಎಸ್ಟಿ ಬಾಕಿ ಉಳಿದಿಲ್ಲ ಎಂದು ಉತ್ತರ ನೀಡಿದ್ದಾರೆ.
ಕೇಂದ್ರದಿಂದ ಜಿಎಸ್ಟಿ ಬಾಕಿ ಉಳಿದಿದೆ ಎಂಬ ಹೇಳಿಕೆಗಳು ಸರಿಯಲ್ಲ, ರಾಜ್ಯಗಳು ಎಜಿ ವರದಿಯನ್ನು ಸಲ್ಲಿಸದೇ ಇರುವುದು ತಪ್ಪು ಎಂದರು. “ಅಕೌಂಟೆಂಟ್ ಜನರಲ್ನ ಪ್ರಮಾಣೀಕರಣ ಕಡ್ಡಾಯವಾಗಿದೆ ಎಂಬುದನ್ನು ರಾಜ್ಯಗಳು ಅರ್ಥ ಮಾಡಿಕೊಳ್ಳುವುದು ಅತಿಮುಖ್ಯ. ಎಜಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸದಿದ್ದರೆ ಜಿಎಸ್ಟಿ ಬಾಕಿ ಬಿಡುಗಡೆ ಸಾಧ್ಯವಿಲ್ಲ, ಕೆಲ ರಾಜ್ಯಗಳು ಎಜಿ ಪ್ರಮಾಣ ಪತ್ರ ಸಲ್ಲಿಸಿದ ನಂತರವೂ ಅಂತಿಮ ಬಾಕಿ ಬಿಡುಗಡೆಯನ್ನು ಸ್ವಲ್ಪ ತಡೆಯುವಂತೆ ಮನವಿ ಮಾಡುತ್ತವೆ” ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ತೃಣಮೂಲ ಕಾಂಗ್ರೆಸ್ ಸದಸ್ಯ ಸಾಕೇತ್ ಗೋಖಲೆ ಪಶ್ಚಿಮ ಬಂಗಾಳದ ಜಿಎಸ್ಟಿ ಬಾಕಿ ಕುರಿತು ಕೇಳಿದ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಕರ್ನಾಟಕ ಹೊತರುಪಡಿಸಿ ಉಳಿದ ಯಾವುದೇ ರಾಜ್ಯಗಳು ಎಜಿ ಪ್ರಮಾಣಪತ್ರವನ್ನು ನೀಡಿಲ್ಲ ಎಂದು ತಿಳಿಸಿದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…