ನವದೆಹಲಿ : ರಾಷ್ಟ್ರರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಪ್ರಮಾಣದ ಮಾಲಿನ್ಯವನ್ನು ದಾಖಲಿಸಿದ ಬೆನ್ನಲ್ಲೇ ಗುರುವಾರ ವಾಯು ತುರ್ತು ಸ್ಥಿತಿಯನ್ನು ಘೋಷಿಸಲಾಗಿದೆ.
ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ಈ ಘೋಷಣೆ ಹೊರಬಿದ್ದಿದೆ. ಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹಾಗೂ ಶನಿವಾರ ಎಲ್ಲ ಸರ್ಕಾರಿ ಮತ್ತು ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಕಟಿಸಿದ್ದಾರೆ.
ಎಲ್ಲ ಅನಗತ್ಯ ನಿರ್ಮಾಣ ಚಟುವಟಿಕೆಗಳನ್ನು ತಕ್ಷಣದಿಂದ ರದ್ದುಪಡಿಸಲಾಗಿದ್ದು, ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡೀಸೆಲ್ ಕಾರುಗಳನ್ನು ದೆಹಲಿಯ ಗುರುಗ್ರಾಮ, ಫರೀದಾಬಾಧ್, ಗಾಜಿಯಾಬಾಧ್ ಮತ್ತು ಗೌತಮಬುದ್ಧ ನಗರಗಳಲ್ಲಿ ನಿಷೇಧಿಸಲಾಗಿದೆ.
ವಾಯುಗುಣಮಟ್ಟ ಸೂಚ್ಯಂಕ ಸೊನ್ನೆಯಿಂದ 50 ಇದ್ದರೆ ಉತ್ತಮ ಎಂದು ಪರಿಗಣಿಸಲಾಗುತ್ತದೆ. 51-100 ಇದ್ದಲ್ಲಿ ಸಮಾಧಾನಕರ, 101-200ನ್ನು ಮಂದ ಮಾಲಿನ್ಯ, 201-300ನ್ನು ಕಳಪೆ, 301-400ನ್ನು ತೀರಾ ಕಳಪೆ, 401-500ನ್ನು ತೀವ್ರ ಸ್ವರೂಪದ ಮಾಲಿನ್ಯ ಹಾಗೂ 500ಕ್ಕಿಂತ ಅಧಿಕ ಇರುವುದನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ದೆಹಲಿಯಲ್ಲಿ ಗುರುವಾರ ರಾತ್ರಿ ಎಕ್ಯೂಐ 422 ಆಗಿದೆ. ಇದು ಈ ಋತುವಿನಲ್ಲಿ ದಾಖಲಾದ ಅತ್ಯಧಿಕ ಮಾಲಿನ್ಯ ಪ್ರಮಾಣವಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…