ನವದೆಹಲಿ : ರಾಷ್ಟ್ರರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಪ್ರಮಾಣದ ಮಾಲಿನ್ಯವನ್ನು ದಾಖಲಿಸಿದ ಬೆನ್ನಲ್ಲೇ ಗುರುವಾರ ವಾಯು ತುರ್ತು ಸ್ಥಿತಿಯನ್ನು ಘೋಷಿಸಲಾಗಿದೆ.
ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ಈ ಘೋಷಣೆ ಹೊರಬಿದ್ದಿದೆ. ಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹಾಗೂ ಶನಿವಾರ ಎಲ್ಲ ಸರ್ಕಾರಿ ಮತ್ತು ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಕಟಿಸಿದ್ದಾರೆ.
ಎಲ್ಲ ಅನಗತ್ಯ ನಿರ್ಮಾಣ ಚಟುವಟಿಕೆಗಳನ್ನು ತಕ್ಷಣದಿಂದ ರದ್ದುಪಡಿಸಲಾಗಿದ್ದು, ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡೀಸೆಲ್ ಕಾರುಗಳನ್ನು ದೆಹಲಿಯ ಗುರುಗ್ರಾಮ, ಫರೀದಾಬಾಧ್, ಗಾಜಿಯಾಬಾಧ್ ಮತ್ತು ಗೌತಮಬುದ್ಧ ನಗರಗಳಲ್ಲಿ ನಿಷೇಧಿಸಲಾಗಿದೆ.
ವಾಯುಗುಣಮಟ್ಟ ಸೂಚ್ಯಂಕ ಸೊನ್ನೆಯಿಂದ 50 ಇದ್ದರೆ ಉತ್ತಮ ಎಂದು ಪರಿಗಣಿಸಲಾಗುತ್ತದೆ. 51-100 ಇದ್ದಲ್ಲಿ ಸಮಾಧಾನಕರ, 101-200ನ್ನು ಮಂದ ಮಾಲಿನ್ಯ, 201-300ನ್ನು ಕಳಪೆ, 301-400ನ್ನು ತೀರಾ ಕಳಪೆ, 401-500ನ್ನು ತೀವ್ರ ಸ್ವರೂಪದ ಮಾಲಿನ್ಯ ಹಾಗೂ 500ಕ್ಕಿಂತ ಅಧಿಕ ಇರುವುದನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ದೆಹಲಿಯಲ್ಲಿ ಗುರುವಾರ ರಾತ್ರಿ ಎಕ್ಯೂಐ 422 ಆಗಿದೆ. ಇದು ಈ ಋತುವಿನಲ್ಲಿ ದಾಖಲಾದ ಅತ್ಯಧಿಕ ಮಾಲಿನ್ಯ ಪ್ರಮಾಣವಾಗಿದೆ.
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…