ನವದೆಹಲಿ : ರಾಷ್ಟ್ರರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಪ್ರಮಾಣದ ಮಾಲಿನ್ಯವನ್ನು ದಾಖಲಿಸಿದ ಬೆನ್ನಲ್ಲೇ ಗುರುವಾರ ವಾಯು ತುರ್ತು ಸ್ಥಿತಿಯನ್ನು ಘೋಷಿಸಲಾಗಿದೆ.
ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ಈ ಘೋಷಣೆ ಹೊರಬಿದ್ದಿದೆ. ಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹಾಗೂ ಶನಿವಾರ ಎಲ್ಲ ಸರ್ಕಾರಿ ಮತ್ತು ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಕಟಿಸಿದ್ದಾರೆ.
ಎಲ್ಲ ಅನಗತ್ಯ ನಿರ್ಮಾಣ ಚಟುವಟಿಕೆಗಳನ್ನು ತಕ್ಷಣದಿಂದ ರದ್ದುಪಡಿಸಲಾಗಿದ್ದು, ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡೀಸೆಲ್ ಕಾರುಗಳನ್ನು ದೆಹಲಿಯ ಗುರುಗ್ರಾಮ, ಫರೀದಾಬಾಧ್, ಗಾಜಿಯಾಬಾಧ್ ಮತ್ತು ಗೌತಮಬುದ್ಧ ನಗರಗಳಲ್ಲಿ ನಿಷೇಧಿಸಲಾಗಿದೆ.
ವಾಯುಗುಣಮಟ್ಟ ಸೂಚ್ಯಂಕ ಸೊನ್ನೆಯಿಂದ 50 ಇದ್ದರೆ ಉತ್ತಮ ಎಂದು ಪರಿಗಣಿಸಲಾಗುತ್ತದೆ. 51-100 ಇದ್ದಲ್ಲಿ ಸಮಾಧಾನಕರ, 101-200ನ್ನು ಮಂದ ಮಾಲಿನ್ಯ, 201-300ನ್ನು ಕಳಪೆ, 301-400ನ್ನು ತೀರಾ ಕಳಪೆ, 401-500ನ್ನು ತೀವ್ರ ಸ್ವರೂಪದ ಮಾಲಿನ್ಯ ಹಾಗೂ 500ಕ್ಕಿಂತ ಅಧಿಕ ಇರುವುದನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ದೆಹಲಿಯಲ್ಲಿ ಗುರುವಾರ ರಾತ್ರಿ ಎಕ್ಯೂಐ 422 ಆಗಿದೆ. ಇದು ಈ ಋತುವಿನಲ್ಲಿ ದಾಖಲಾದ ಅತ್ಯಧಿಕ ಮಾಲಿನ್ಯ ಪ್ರಮಾಣವಾಗಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…