BREAKING NEWS

ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ : ಶಾಲೆಗಳಿಗೆ ರಜೆ

ನವದೆಹಲಿ : ರಾಷ್ಟ್ರರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಪ್ರಮಾಣದ ಮಾಲಿನ್ಯವನ್ನು ದಾಖಲಿಸಿದ ಬೆನ್ನಲ್ಲೇ ಗುರುವಾರ ವಾಯು ತುರ್ತು ಸ್ಥಿತಿಯನ್ನು ಘೋಷಿಸಲಾಗಿದೆ.

ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ಈ ಘೋಷಣೆ ಹೊರಬಿದ್ದಿದೆ. ಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹಾಗೂ ಶನಿವಾರ ಎಲ್ಲ ಸರ್ಕಾರಿ ಮತ್ತು ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಕಟಿಸಿದ್ದಾರೆ.

ಎಲ್ಲ ಅನಗತ್ಯ ನಿರ್ಮಾಣ ಚಟುವಟಿಕೆಗಳನ್ನು ತಕ್ಷಣದಿಂದ ರದ್ದುಪಡಿಸಲಾಗಿದ್ದು, ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡೀಸೆಲ್ ಕಾರುಗಳನ್ನು ದೆಹಲಿಯ ಗುರುಗ್ರಾಮ, ಫರೀದಾಬಾಧ್, ಗಾಜಿಯಾಬಾಧ್ ಮತ್ತು ಗೌತಮಬುದ್ಧ ನಗರಗಳಲ್ಲಿ ನಿಷೇಧಿಸಲಾಗಿದೆ.

ವಾಯುಗುಣಮಟ್ಟ ಸೂಚ್ಯಂಕ ಸೊನ್ನೆಯಿಂದ 50 ಇದ್ದರೆ ಉತ್ತಮ ಎಂದು ಪರಿಗಣಿಸಲಾಗುತ್ತದೆ. 51-100 ಇದ್ದಲ್ಲಿ ಸಮಾಧಾನಕರ, 101-200ನ್ನು ಮಂದ ಮಾಲಿನ್ಯ, 201-300ನ್ನು ಕಳಪೆ, 301-400ನ್ನು ತೀರಾ ಕಳಪೆ, 401-500ನ್ನು ತೀವ್ರ ಸ್ವರೂಪದ ಮಾಲಿನ್ಯ ಹಾಗೂ 500ಕ್ಕಿಂತ ಅಧಿಕ ಇರುವುದನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ದೆಹಲಿಯಲ್ಲಿ ಗುರುವಾರ ರಾತ್ರಿ ಎಕ್ಯೂಐ 422 ಆಗಿದೆ. ಇದು ಈ ಋತುವಿನಲ್ಲಿ ದಾಖಲಾದ ಅತ್ಯಧಿಕ ಮಾಲಿನ್ಯ ಪ್ರಮಾಣವಾಗಿದೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

8 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago