BREAKING NEWS

ಅಬಕಾರಿ ಪ್ರಕರಣ: ಸಿಸೋಡಿಯಾ, ಪತ್ನಿ ಇತರರಿಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಅವರ ಪತ್ನಿ ಮತ್ತು ಇತರ ಕೆಲವು ಆರೋಪಿಗಳಿಗೆ ಸೇರಿದ 52 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ತಿಳಿಸಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಮನೀಶ್ ಸಿಸೋಡಿಯಾ ಮತ್ತು ಅವರ ಪತ್ನಿ ಸೀಮಾ ಸಿಸೋಡಿಯಾ ಅವರ ಎರಡು ಆಸ್ತಿಗಳು, ಮತ್ತೋರ್ವ ಆರೋಪಿ ರಾಜೇಶ್ ಜೋಶಿ(ಚಾರಿಯಟ್ ಪ್ರೊಡಕ್ಷನ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ) ಮತ್ತು ಗೌತಮ್ ಮಲ್ಹೋತ್ರಾ ಅವರ ಜಮೀನು/ಫ್ಲಾಟ್‌ಗಳನ್ನು ಒಳಗೊಂಡಿರುವ ಇತರ ಸ್ಥಿರಾಸ್ತಿಗಳನ್ನು(ರೂ. 7.29 ಕೋಟಿ) ಮುಟ್ಟುಗೋಲು ಹಾಕಿಕೊಳ್ಳಲು ತಾತ್ಕಾಲಿಕ ಆದೇಶ ಹೊರಡಿಸಲಾಗಿದೆ.

ಮನೀಶ್ ಸಿಸೋಡಿಯಾ ಅವರ ಬ್ಯಾಂಕ್ ಬ್ಯಾಲೆನ್ಸ್ 11.49 ಲಕ್ಷ ರೂಪಾಯಿ, ಬ್ರಿಂಡ್ಕೋ ಸೇಲ್ಸ್ ಪ್ರೈ.ಲಿ (ಮೊತ್ತ ರೂ. 16.45 ಕೋಟಿ) ಮತ್ತು ಇತರರ ಆಸ್ತಿ ಸೇರಿದಂತೆ 44. 29 ಕೋಟಿ ರೂ. ಮೌಲ್ಯದ ಚರ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು ಲಗತ್ತು ಮೌಲ್ಯ 52.24 ಕೋಟಿ ರೂಪಾಯಿ ಎಂದು ಇಡಿ ತಿಳಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ಕಳೆದ ಮಾರ್ಚ್‌ನಲ್ಲಿ ಇಡಿ ಬಂಧಿಸಿದ್ದು, ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago