BREAKING NEWS

ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ದೇಶದಲ್ಲಿ ಮೆಟ್ರೊ ಮತ್ತು ನಮೋ ರೈಲುಗಳು ಕ್ರಾಂತಿಯನ್ನುಂಟು ಮಾಡಲಿವೆ. ನೋಯ್ಡಾ, ಗಾಜಿಯಾಬಾದ್, ಮೀರತ್, ಲಖ್ನೋ, ಆಗ್ರಾ, ಕಾನ್ಪುರದಂತಹ ನಗರಗಳಲ್ಲಿ ಮೆಟ್ರೊ ಸಂಚರಿಸಲಿವೆ. ಇದೇ ರೀತಿ ಬೆಂಗಳೂರು ಮತ್ತು ಮೈಸೂರನ್ನು ಮೆಟ್ರೊ ನಗರಗಳನ್ನಾಗಿ ಪರಿವರ್ತಿಸುವುದಾಗಿ ಪ್ರಕಟಿಸಿದರು. ದೇಶದ ಅನೇಕ ಕಡೆ ಸುಗಮ ಸಂಚಾರಕ್ಕಾಗಿ ಮೆಟ್ರೊ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಈಗ 2ನೇ ಹಂತದ ನಗರಗಳಲ್ಲೂ ಇದರ ಅವಶ್ಯಕತೆ ಕಂಡುಬರುತ್ತಿದೆ ಎಂದು ಹೇಳಿದರು.

ಭಾರತ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಯಲ್ಲಿ ಹೊಸ ದಿಕ್ಕಿನತ್ತ ಮುಖ ಮಾಡಿದೆ. ಚಂದ್ರಯಾನದ ಮೂಲಕ ಚಂದ್ರನನ್ನು ತಲುಪಿದೆ. ವಿಶ್ವದಲ್ಲಿ ನಮ್ಮ ದೇಶ ಪ್ರಕಾಶಿಸುತ್ತಿದೆ. ಜಿ-20 ಶೃಂಗಸಭೆಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಜಗತ್ತಿನ ಗಮನ ಸೆಳೆದಿದ್ದೇವೆ. ಏಷ್ಯನ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದಾರೆಂದು ದೇಶದ ಸಾಧನೆಯನ್ನು ಕೊಂಡಾಡಿದರು.

ಪ್ಲಾಟ್‍ಫಾರಂನಲ್ಲಿ ಸ್ಕ್ರೀನ್‍ವಿಂಡೋವನ್ನು ಮೆಡ್ ಇಂಡಿಯಾ ಯೋಜನೆಯಲ್ಲೇ ರೂಪಿಸಲಾಗಿದೆ. ನಮೋ ಭಾರತ್ ರೈಲಿನಲ್ಲಿ ಗಾಳಿಗಿಂತಲೂ ಕಡಿಮೆ ಶಬ್ದ ಇದೆ. ಸುಖಕರ ಪ್ರಯಾಣಕ್ಕೆ ಪೂರಕವಾಗಿದೆ. ಮೊದಲ ಹಂತದಲ್ಲಿ ದೆಹಲಿ, ಉತ್ತರಪ್ರದೇಶ, ಹರಿಯಾಣ ಹಾಗೂ ರಾಜಸ್ಥಾನಗಳನ್ನು ನಮೋ ಭಾರತ್ ರೈಲು ಸಂಪರ್ಕಿಸಲಿದೆ ಎಂದು ತಿಳಿಸಿದರು.

ಮೂರನೇ ದಶಕದಲ್ಲಿ ಭಾರತೀಯ ರೈಲ್ವೆಗೆ ಕಾಯಕಲ್ಪ ನೀಡುವ ಅಗತ್ಯವಿದೆ. ಚಿಕ್ಕಕನಸು ಕಾಣಲು ನನಗೆ ಸಾಧ್ಯವಿಲ್ಲ. ಸಾಯುತ್ತ ತೆಳಲುವುದಿಲ್ಲ. ಈ ದಶಕದ ಕೊನೆಯಲ್ಲಿ ಭಾರತದ ರೈಲ್ವೆ ವಿಶ್ವದ ಯಾವುದೇ ರೈಲು ವ್ಯವಸ್ಥೆಗಿಂತಲೂ ಕಡಿಮೆ ಇರುವುದಿಲ್ಲ ಎಂದು ಭರವಸೆ ನೀಡಿದರು.

ನಮೋ ಭಾರತ್ ಶುರುವಾಗಿದೆ. ಇದಕ್ಕೂ ಮೊದಲು ವಂದೇ ಭಾರತ್ ಯೋಜನೆಯಡಿ ಆಧುನಿಕ ಸೌಲಭ್ಯ ಒದಗಿಸಲಾಗಿದೆ. ಅಮೃತ್ ಭಾರತ್, ಒಂದೇ ಭಾರತ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಂಪರ್ಕ ಯೋಜನೆಗಳು ಸುಧಾರಿಸಲಾಗುತ್ತಿದೆ. ಬಹುಮಾದರಿ ಸೌಲಭ್ಯಗಳ ಮೂಲಕ ಸಂಪರ್ಕವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

andolanait

Recent Posts

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

13 mins ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

14 mins ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

32 mins ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

56 mins ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

1 hour ago

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

2 hours ago