BREAKING NEWS

ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ದೇಶದಲ್ಲಿ ಮೆಟ್ರೊ ಮತ್ತು ನಮೋ ರೈಲುಗಳು ಕ್ರಾಂತಿಯನ್ನುಂಟು ಮಾಡಲಿವೆ. ನೋಯ್ಡಾ, ಗಾಜಿಯಾಬಾದ್, ಮೀರತ್, ಲಖ್ನೋ, ಆಗ್ರಾ, ಕಾನ್ಪುರದಂತಹ ನಗರಗಳಲ್ಲಿ ಮೆಟ್ರೊ ಸಂಚರಿಸಲಿವೆ. ಇದೇ ರೀತಿ ಬೆಂಗಳೂರು ಮತ್ತು ಮೈಸೂರನ್ನು ಮೆಟ್ರೊ ನಗರಗಳನ್ನಾಗಿ ಪರಿವರ್ತಿಸುವುದಾಗಿ ಪ್ರಕಟಿಸಿದರು. ದೇಶದ ಅನೇಕ ಕಡೆ ಸುಗಮ ಸಂಚಾರಕ್ಕಾಗಿ ಮೆಟ್ರೊ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಈಗ 2ನೇ ಹಂತದ ನಗರಗಳಲ್ಲೂ ಇದರ ಅವಶ್ಯಕತೆ ಕಂಡುಬರುತ್ತಿದೆ ಎಂದು ಹೇಳಿದರು.

ಭಾರತ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಯಲ್ಲಿ ಹೊಸ ದಿಕ್ಕಿನತ್ತ ಮುಖ ಮಾಡಿದೆ. ಚಂದ್ರಯಾನದ ಮೂಲಕ ಚಂದ್ರನನ್ನು ತಲುಪಿದೆ. ವಿಶ್ವದಲ್ಲಿ ನಮ್ಮ ದೇಶ ಪ್ರಕಾಶಿಸುತ್ತಿದೆ. ಜಿ-20 ಶೃಂಗಸಭೆಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಜಗತ್ತಿನ ಗಮನ ಸೆಳೆದಿದ್ದೇವೆ. ಏಷ್ಯನ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದಾರೆಂದು ದೇಶದ ಸಾಧನೆಯನ್ನು ಕೊಂಡಾಡಿದರು.

ಪ್ಲಾಟ್‍ಫಾರಂನಲ್ಲಿ ಸ್ಕ್ರೀನ್‍ವಿಂಡೋವನ್ನು ಮೆಡ್ ಇಂಡಿಯಾ ಯೋಜನೆಯಲ್ಲೇ ರೂಪಿಸಲಾಗಿದೆ. ನಮೋ ಭಾರತ್ ರೈಲಿನಲ್ಲಿ ಗಾಳಿಗಿಂತಲೂ ಕಡಿಮೆ ಶಬ್ದ ಇದೆ. ಸುಖಕರ ಪ್ರಯಾಣಕ್ಕೆ ಪೂರಕವಾಗಿದೆ. ಮೊದಲ ಹಂತದಲ್ಲಿ ದೆಹಲಿ, ಉತ್ತರಪ್ರದೇಶ, ಹರಿಯಾಣ ಹಾಗೂ ರಾಜಸ್ಥಾನಗಳನ್ನು ನಮೋ ಭಾರತ್ ರೈಲು ಸಂಪರ್ಕಿಸಲಿದೆ ಎಂದು ತಿಳಿಸಿದರು.

ಮೂರನೇ ದಶಕದಲ್ಲಿ ಭಾರತೀಯ ರೈಲ್ವೆಗೆ ಕಾಯಕಲ್ಪ ನೀಡುವ ಅಗತ್ಯವಿದೆ. ಚಿಕ್ಕಕನಸು ಕಾಣಲು ನನಗೆ ಸಾಧ್ಯವಿಲ್ಲ. ಸಾಯುತ್ತ ತೆಳಲುವುದಿಲ್ಲ. ಈ ದಶಕದ ಕೊನೆಯಲ್ಲಿ ಭಾರತದ ರೈಲ್ವೆ ವಿಶ್ವದ ಯಾವುದೇ ರೈಲು ವ್ಯವಸ್ಥೆಗಿಂತಲೂ ಕಡಿಮೆ ಇರುವುದಿಲ್ಲ ಎಂದು ಭರವಸೆ ನೀಡಿದರು.

ನಮೋ ಭಾರತ್ ಶುರುವಾಗಿದೆ. ಇದಕ್ಕೂ ಮೊದಲು ವಂದೇ ಭಾರತ್ ಯೋಜನೆಯಡಿ ಆಧುನಿಕ ಸೌಲಭ್ಯ ಒದಗಿಸಲಾಗಿದೆ. ಅಮೃತ್ ಭಾರತ್, ಒಂದೇ ಭಾರತ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಂಪರ್ಕ ಯೋಜನೆಗಳು ಸುಧಾರಿಸಲಾಗುತ್ತಿದೆ. ಬಹುಮಾದರಿ ಸೌಲಭ್ಯಗಳ ಮೂಲಕ ಸಂಪರ್ಕವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago