BREAKING NEWS

ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ದೇಶದಲ್ಲಿ ಮೆಟ್ರೊ ಮತ್ತು ನಮೋ ರೈಲುಗಳು ಕ್ರಾಂತಿಯನ್ನುಂಟು ಮಾಡಲಿವೆ. ನೋಯ್ಡಾ, ಗಾಜಿಯಾಬಾದ್, ಮೀರತ್, ಲಖ್ನೋ, ಆಗ್ರಾ, ಕಾನ್ಪುರದಂತಹ ನಗರಗಳಲ್ಲಿ ಮೆಟ್ರೊ ಸಂಚರಿಸಲಿವೆ. ಇದೇ ರೀತಿ ಬೆಂಗಳೂರು ಮತ್ತು ಮೈಸೂರನ್ನು ಮೆಟ್ರೊ ನಗರಗಳನ್ನಾಗಿ ಪರಿವರ್ತಿಸುವುದಾಗಿ ಪ್ರಕಟಿಸಿದರು. ದೇಶದ ಅನೇಕ ಕಡೆ ಸುಗಮ ಸಂಚಾರಕ್ಕಾಗಿ ಮೆಟ್ರೊ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಈಗ 2ನೇ ಹಂತದ ನಗರಗಳಲ್ಲೂ ಇದರ ಅವಶ್ಯಕತೆ ಕಂಡುಬರುತ್ತಿದೆ ಎಂದು ಹೇಳಿದರು.

ಭಾರತ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಯಲ್ಲಿ ಹೊಸ ದಿಕ್ಕಿನತ್ತ ಮುಖ ಮಾಡಿದೆ. ಚಂದ್ರಯಾನದ ಮೂಲಕ ಚಂದ್ರನನ್ನು ತಲುಪಿದೆ. ವಿಶ್ವದಲ್ಲಿ ನಮ್ಮ ದೇಶ ಪ್ರಕಾಶಿಸುತ್ತಿದೆ. ಜಿ-20 ಶೃಂಗಸಭೆಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಜಗತ್ತಿನ ಗಮನ ಸೆಳೆದಿದ್ದೇವೆ. ಏಷ್ಯನ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದಾರೆಂದು ದೇಶದ ಸಾಧನೆಯನ್ನು ಕೊಂಡಾಡಿದರು.

ಪ್ಲಾಟ್‍ಫಾರಂನಲ್ಲಿ ಸ್ಕ್ರೀನ್‍ವಿಂಡೋವನ್ನು ಮೆಡ್ ಇಂಡಿಯಾ ಯೋಜನೆಯಲ್ಲೇ ರೂಪಿಸಲಾಗಿದೆ. ನಮೋ ಭಾರತ್ ರೈಲಿನಲ್ಲಿ ಗಾಳಿಗಿಂತಲೂ ಕಡಿಮೆ ಶಬ್ದ ಇದೆ. ಸುಖಕರ ಪ್ರಯಾಣಕ್ಕೆ ಪೂರಕವಾಗಿದೆ. ಮೊದಲ ಹಂತದಲ್ಲಿ ದೆಹಲಿ, ಉತ್ತರಪ್ರದೇಶ, ಹರಿಯಾಣ ಹಾಗೂ ರಾಜಸ್ಥಾನಗಳನ್ನು ನಮೋ ಭಾರತ್ ರೈಲು ಸಂಪರ್ಕಿಸಲಿದೆ ಎಂದು ತಿಳಿಸಿದರು.

ಮೂರನೇ ದಶಕದಲ್ಲಿ ಭಾರತೀಯ ರೈಲ್ವೆಗೆ ಕಾಯಕಲ್ಪ ನೀಡುವ ಅಗತ್ಯವಿದೆ. ಚಿಕ್ಕಕನಸು ಕಾಣಲು ನನಗೆ ಸಾಧ್ಯವಿಲ್ಲ. ಸಾಯುತ್ತ ತೆಳಲುವುದಿಲ್ಲ. ಈ ದಶಕದ ಕೊನೆಯಲ್ಲಿ ಭಾರತದ ರೈಲ್ವೆ ವಿಶ್ವದ ಯಾವುದೇ ರೈಲು ವ್ಯವಸ್ಥೆಗಿಂತಲೂ ಕಡಿಮೆ ಇರುವುದಿಲ್ಲ ಎಂದು ಭರವಸೆ ನೀಡಿದರು.

ನಮೋ ಭಾರತ್ ಶುರುವಾಗಿದೆ. ಇದಕ್ಕೂ ಮೊದಲು ವಂದೇ ಭಾರತ್ ಯೋಜನೆಯಡಿ ಆಧುನಿಕ ಸೌಲಭ್ಯ ಒದಗಿಸಲಾಗಿದೆ. ಅಮೃತ್ ಭಾರತ್, ಒಂದೇ ಭಾರತ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಂಪರ್ಕ ಯೋಜನೆಗಳು ಸುಧಾರಿಸಲಾಗುತ್ತಿದೆ. ಬಹುಮಾದರಿ ಸೌಲಭ್ಯಗಳ ಮೂಲಕ ಸಂಪರ್ಕವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

9 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

10 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

10 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

11 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

14 hours ago