BREAKING NEWS

ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ದೇಶದಲ್ಲಿ ಮೆಟ್ರೊ ಮತ್ತು ನಮೋ ರೈಲುಗಳು ಕ್ರಾಂತಿಯನ್ನುಂಟು ಮಾಡಲಿವೆ. ನೋಯ್ಡಾ, ಗಾಜಿಯಾಬಾದ್, ಮೀರತ್, ಲಖ್ನೋ, ಆಗ್ರಾ, ಕಾನ್ಪುರದಂತಹ ನಗರಗಳಲ್ಲಿ ಮೆಟ್ರೊ ಸಂಚರಿಸಲಿವೆ. ಇದೇ ರೀತಿ ಬೆಂಗಳೂರು ಮತ್ತು ಮೈಸೂರನ್ನು ಮೆಟ್ರೊ ನಗರಗಳನ್ನಾಗಿ ಪರಿವರ್ತಿಸುವುದಾಗಿ ಪ್ರಕಟಿಸಿದರು. ದೇಶದ ಅನೇಕ ಕಡೆ ಸುಗಮ ಸಂಚಾರಕ್ಕಾಗಿ ಮೆಟ್ರೊ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಈಗ 2ನೇ ಹಂತದ ನಗರಗಳಲ್ಲೂ ಇದರ ಅವಶ್ಯಕತೆ ಕಂಡುಬರುತ್ತಿದೆ ಎಂದು ಹೇಳಿದರು.

ಭಾರತ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಯಲ್ಲಿ ಹೊಸ ದಿಕ್ಕಿನತ್ತ ಮುಖ ಮಾಡಿದೆ. ಚಂದ್ರಯಾನದ ಮೂಲಕ ಚಂದ್ರನನ್ನು ತಲುಪಿದೆ. ವಿಶ್ವದಲ್ಲಿ ನಮ್ಮ ದೇಶ ಪ್ರಕಾಶಿಸುತ್ತಿದೆ. ಜಿ-20 ಶೃಂಗಸಭೆಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಜಗತ್ತಿನ ಗಮನ ಸೆಳೆದಿದ್ದೇವೆ. ಏಷ್ಯನ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದಾರೆಂದು ದೇಶದ ಸಾಧನೆಯನ್ನು ಕೊಂಡಾಡಿದರು.

ಪ್ಲಾಟ್‍ಫಾರಂನಲ್ಲಿ ಸ್ಕ್ರೀನ್‍ವಿಂಡೋವನ್ನು ಮೆಡ್ ಇಂಡಿಯಾ ಯೋಜನೆಯಲ್ಲೇ ರೂಪಿಸಲಾಗಿದೆ. ನಮೋ ಭಾರತ್ ರೈಲಿನಲ್ಲಿ ಗಾಳಿಗಿಂತಲೂ ಕಡಿಮೆ ಶಬ್ದ ಇದೆ. ಸುಖಕರ ಪ್ರಯಾಣಕ್ಕೆ ಪೂರಕವಾಗಿದೆ. ಮೊದಲ ಹಂತದಲ್ಲಿ ದೆಹಲಿ, ಉತ್ತರಪ್ರದೇಶ, ಹರಿಯಾಣ ಹಾಗೂ ರಾಜಸ್ಥಾನಗಳನ್ನು ನಮೋ ಭಾರತ್ ರೈಲು ಸಂಪರ್ಕಿಸಲಿದೆ ಎಂದು ತಿಳಿಸಿದರು.

ಮೂರನೇ ದಶಕದಲ್ಲಿ ಭಾರತೀಯ ರೈಲ್ವೆಗೆ ಕಾಯಕಲ್ಪ ನೀಡುವ ಅಗತ್ಯವಿದೆ. ಚಿಕ್ಕಕನಸು ಕಾಣಲು ನನಗೆ ಸಾಧ್ಯವಿಲ್ಲ. ಸಾಯುತ್ತ ತೆಳಲುವುದಿಲ್ಲ. ಈ ದಶಕದ ಕೊನೆಯಲ್ಲಿ ಭಾರತದ ರೈಲ್ವೆ ವಿಶ್ವದ ಯಾವುದೇ ರೈಲು ವ್ಯವಸ್ಥೆಗಿಂತಲೂ ಕಡಿಮೆ ಇರುವುದಿಲ್ಲ ಎಂದು ಭರವಸೆ ನೀಡಿದರು.

ನಮೋ ಭಾರತ್ ಶುರುವಾಗಿದೆ. ಇದಕ್ಕೂ ಮೊದಲು ವಂದೇ ಭಾರತ್ ಯೋಜನೆಯಡಿ ಆಧುನಿಕ ಸೌಲಭ್ಯ ಒದಗಿಸಲಾಗಿದೆ. ಅಮೃತ್ ಭಾರತ್, ಒಂದೇ ಭಾರತ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಂಪರ್ಕ ಯೋಜನೆಗಳು ಸುಧಾರಿಸಲಾಗುತ್ತಿದೆ. ಬಹುಮಾದರಿ ಸೌಲಭ್ಯಗಳ ಮೂಲಕ ಸಂಪರ್ಕವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

andolanait

Recent Posts

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…

27 mins ago

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

4 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

17 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

18 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

19 hours ago