ಉತ್ತರ ಪ್ರದೇಶ : ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ವಿಶ್ವಸಂಸ್ಥೆ ಜಾಗತಿಕ ಜನಸಂಖ್ಯಾ ಅಂದಾಜು ವರದಿ ನೀಡಿದ್ದು, ‘ಸರ್ಕಾರದ ವೈಫಲ್ಯತೆಯೇ ಭಾರತದಲ್ಲಿ ಜನಸಂಖ್ಯೆ ಹೆಚ್ಚಲು ಕಾರಣ‘ ಎಂದು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗುರುವಾರ ಹೇಳಿದ್ದಾರೆ.
ಕಳೆದ ದಿನ ಬಿಡುಗಡೆಯಾದ ವಿಶ್ವಸಂಸ್ಥೆ ಜಾಗತಿಕ ಜನಸಂಖ್ಯಾ ಅಂದಾಜು ವರದಿಯ ಅಂಕಿಅಂಶಗಳ ಪ್ರಕಾರ ಭಾರತವು 142.86 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಚೀನಾದ ಜನಸಂಖ್ಯೆಯಲ್ಲಿ ಕುಸಿತ ಕಂಡಿದೆ ಎಂದು ಈ ವರದಿ ಹೇಳಿತ್ತು. ಇನ್ನು ಮೂರು ದಶಕಗಳಲ್ಲಿ ಭಾರತದಲ್ಲಿ ಜನಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಈ ವರದಿ ಪ್ರಕಟಿಸಿತ್ತು,
ಈ ಬಗ್ಗೆ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್, ’ಆತಂಕಕಾರಿ ಸುದ್ದಿ: ಭಾರತದ ಜನಸಂಖ್ಯೆಯಲ್ಲಿ ಹೆಚ್ಚಳ. ಕಾರಣ: ಸರ್ಕಾರದ ವೈಫಲ್ಯ‘ ಎಂದು ಬರೆದುಕೊಂಡಿದ್ದಾರೆ.
‘ಬಡತನ ಮತ್ತು ನಿರುದ್ಯೋಗದಿಂದ ಜನರು ಹೆಚ್ಚು ಹೆಚ್ಚು ಮಕ್ಕಳನ್ನು ಪಡೆಯುತ್ತಿದ್ದಾರೆ. ಮಕ್ಕಳು ಕೆಲಸ ಮಾಡಿ ತಮ್ಮ ಕುಟುಂಬವನ್ನು ಸಲಹುತ್ತಾರೆ ಎಂಬ ಭಾವನೆ ಜನರಿಗಿದೆ. ಈ ಕಾರಣಕ್ಕೆ ಜನಸಂಖ್ಯೆ ಹೆಚ್ಚಳವಾಗಿದೆ‘ ಎಂದು ಯಾದವ್ ಹೇಳಿದ್ದಾರೆ.
‘ವೈದ್ಯಕೀಯ ಚಿಕಿತ್ಸೆಯ ಕೊರತೆಯಿಂದ ಶಿಶು ಮರಣದ ಹೊಂದುತ್ತಿದ್ದು, ಈ ಬಗ್ಗೆ ಜನರು ಭಯದಲ್ಲಿದ್ದಾರೆ. ಅಲ್ಲದೇ ಸರ್ಕಾರ ಗರ್ಭ ನಿರೋಧಕ ಮಾತ್ರೆಗಳನ್ನು ಸರಿಯಾಗಿ ವಿತರಿಸುತ್ತಿಲ್ಲ. ಶಿಕ್ಷಣದ ಕೊರತೆ ಜನಸಂಖ್ಯೆ ಹೆಚ್ಚಳಕ್ಕೆ ಇನ್ನೊಂದು ಕಾರಣವಾಗಿದೆ. ಸರಿಯಾದ ಶಿಕ್ಷಣವಿಲ್ಲದ ಕಾರಣ ಜನಸಂಖ್ಯೆಯ ಒತ್ತಡದ ಬಗ್ಗೆ ಜನರಿಗೆ ಜ್ಞಾನವಿಲ್ಲ‘ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…