ಉತ್ತರ ಪ್ರದೇಶ : ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ವಿಶ್ವಸಂಸ್ಥೆ ಜಾಗತಿಕ ಜನಸಂಖ್ಯಾ ಅಂದಾಜು ವರದಿ ನೀಡಿದ್ದು, ‘ಸರ್ಕಾರದ ವೈಫಲ್ಯತೆಯೇ ಭಾರತದಲ್ಲಿ ಜನಸಂಖ್ಯೆ ಹೆಚ್ಚಲು ಕಾರಣ‘ ಎಂದು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗುರುವಾರ ಹೇಳಿದ್ದಾರೆ.
ಕಳೆದ ದಿನ ಬಿಡುಗಡೆಯಾದ ವಿಶ್ವಸಂಸ್ಥೆ ಜಾಗತಿಕ ಜನಸಂಖ್ಯಾ ಅಂದಾಜು ವರದಿಯ ಅಂಕಿಅಂಶಗಳ ಪ್ರಕಾರ ಭಾರತವು 142.86 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಚೀನಾದ ಜನಸಂಖ್ಯೆಯಲ್ಲಿ ಕುಸಿತ ಕಂಡಿದೆ ಎಂದು ಈ ವರದಿ ಹೇಳಿತ್ತು. ಇನ್ನು ಮೂರು ದಶಕಗಳಲ್ಲಿ ಭಾರತದಲ್ಲಿ ಜನಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಈ ವರದಿ ಪ್ರಕಟಿಸಿತ್ತು,
ಈ ಬಗ್ಗೆ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್, ’ಆತಂಕಕಾರಿ ಸುದ್ದಿ: ಭಾರತದ ಜನಸಂಖ್ಯೆಯಲ್ಲಿ ಹೆಚ್ಚಳ. ಕಾರಣ: ಸರ್ಕಾರದ ವೈಫಲ್ಯ‘ ಎಂದು ಬರೆದುಕೊಂಡಿದ್ದಾರೆ.
‘ಬಡತನ ಮತ್ತು ನಿರುದ್ಯೋಗದಿಂದ ಜನರು ಹೆಚ್ಚು ಹೆಚ್ಚು ಮಕ್ಕಳನ್ನು ಪಡೆಯುತ್ತಿದ್ದಾರೆ. ಮಕ್ಕಳು ಕೆಲಸ ಮಾಡಿ ತಮ್ಮ ಕುಟುಂಬವನ್ನು ಸಲಹುತ್ತಾರೆ ಎಂಬ ಭಾವನೆ ಜನರಿಗಿದೆ. ಈ ಕಾರಣಕ್ಕೆ ಜನಸಂಖ್ಯೆ ಹೆಚ್ಚಳವಾಗಿದೆ‘ ಎಂದು ಯಾದವ್ ಹೇಳಿದ್ದಾರೆ.
‘ವೈದ್ಯಕೀಯ ಚಿಕಿತ್ಸೆಯ ಕೊರತೆಯಿಂದ ಶಿಶು ಮರಣದ ಹೊಂದುತ್ತಿದ್ದು, ಈ ಬಗ್ಗೆ ಜನರು ಭಯದಲ್ಲಿದ್ದಾರೆ. ಅಲ್ಲದೇ ಸರ್ಕಾರ ಗರ್ಭ ನಿರೋಧಕ ಮಾತ್ರೆಗಳನ್ನು ಸರಿಯಾಗಿ ವಿತರಿಸುತ್ತಿಲ್ಲ. ಶಿಕ್ಷಣದ ಕೊರತೆ ಜನಸಂಖ್ಯೆ ಹೆಚ್ಚಳಕ್ಕೆ ಇನ್ನೊಂದು ಕಾರಣವಾಗಿದೆ. ಸರಿಯಾದ ಶಿಕ್ಷಣವಿಲ್ಲದ ಕಾರಣ ಜನಸಂಖ್ಯೆಯ ಒತ್ತಡದ ಬಗ್ಗೆ ಜನರಿಗೆ ಜ್ಞಾನವಿಲ್ಲ‘ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…