BREAKING NEWS

ಸಿದ್ದರಾಮಯ್ಯ ಸರ್ಕಾರಕ್ಕೆ ಫೇಕ್ ನ್ಯೂಸ್ ಕಾಟ: ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು: ಪಂಚ ಗ್ಯಾರಂಟಿಗಳು ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್‌ ನ್ಯೂಸ್‌ಗಳು ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವು ತಂದೊಡ್ಡಿದ್ದು, ಇದಕ್ಕೆ ಕಡಿವಾಣ ಹಾಕಲು ಉನ್ನತ ಮಟ್ಟದಲ್ಲೇ ಚಿಂತನೆಗಳು ನಡೆಯುತ್ತಿವೆ.

ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ, ಫೋಟೋ, ವಿಡಿಯೋ ಹಂಚಿಕೊಳ್ಳುವವ ವಿರುದ್ಧ ಕಠಿಣ‌ ಕ್ರಮ ಕೈಗೊಳ್ಳಲು ಸಚಿವರ ಆಗ್ರಹದ ಬೆನ್ನಲ್ಲೇ,‌ ಸಿಎಂ‌ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.

 

ಫೇಕ್‌, ಪೋಟೋ ವಿಡಿಯೋ ಹಾವಳಿ

ಇತ್ತೀಚೆಗೆ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹಳೇ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಉಡುಪಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ಸಿಬ್ಬಂದಿ ಕಬ್ಬಡಿ ಆಟವಾಡಿದ ವಿಡಿಯೋವನ್ನು ವೈರಲ್ ಮಾಡಲಾಗಿತ್ತು.

 

ಈ ವಿಡಿಯೋದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಖಾಸಗಿ ಬಸ್ ಸಿಬ್ಬಂದಿ ಕೆಲಸ ಇಲ್ಲದೆ, ಪ್ರಯಾಣಿಕರಿಲ್ಲದೆ ಆಟವಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಉಲ್ಲೇಖ ಮಾಡಲಾಗಿತ್ತು. ಇದಷ್ಟೇ ಅಲ್ಲ, ಮಹಿಳಾ ಪ್ರಯಾಣಿಕರ ನೂಕುನುಗ್ಗಲಿನಿಂದ ಬಸ್‌ಗೆ ಹಾನಿಯಾದ ಕೆಲವು ಫೇಕ್ ಫೋಟೋಗಳನ್ನು‌ ಹಂಚಿಕೊಳ್ಳಲಾಗಿತ್ತು.

 

ಅಧಿಕಾರಿಗಳಿಗೆ ಖಡಕ್‌ ಸೂಚನೆ

ಈ ಎಲ್ಲಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದೀಗ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

 

ಗೃಹ ಸಚಿವರ ಜೊತೆಗೂ ಮಾತುಕತೆ

ಈಗಾಗಲೇ ಸಿಎಂ‌‌ ಸಿದ್ದರಾಮಯ್ಯ ಅವರು, ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ ಎಂಬ ಚರ್ಚೆ ನಡೆದಿದೆ.

ಲೋಕಸಭಾ ಚುನಾವಣಾ ದೃಷ್ಟಿಯಿಂದ ಕ್ರಮ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಫೇಕ್ ನ್ಯೂಸ್‌ಗಳಿಗೆ ಕಡಿವಾಣ ಹಾಕುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

 

ಕೈ ವಿರುದ್ಧವೂ ಕೇಳಿ ಬಂದಿದ್ದ ಫೇಕ್ ನ್ಯೂಸ್ ಆರೋಪ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವೂ ಫೇಕ್ ನ್ಯೂಸ್ ಸೃಷ್ಟಿ ಆರೋಪ ಕೇಳಿಬಂದಿತ್ತು. ಬಿಜೆಪಿಯ ಕೆಲವು ನಾಯಕರ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಫೇಕ್ ನ್ಯೂಸ್ ಸೃಷ್ಟಿ ಮಾಡಿದೆ ಎಂಬ ಆರೋಪ ಇತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ವಿರುದ್ಧವೂ ಕಾಂಗ್ರೆಸ್ ಆರೋಪ ಮಾಡಿತ್ತು. ಹಾಗಿದ್ದರೂ ವಿಧಾನಸಭೆ ಚುನಾವಣೆಯಲ್ಲಿ ಫೇಕ್ ಸುದ್ದಿಗಳು ಸಾಕಷ್ಟು ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದ್ದವು.

andolanait

Recent Posts

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

11 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

25 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

38 mins ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

2 hours ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…

2 hours ago