BREAKING NEWS

ಸಿದ್ದರಾಮಯ್ಯ ಸರ್ಕಾರಕ್ಕೆ ಫೇಕ್ ನ್ಯೂಸ್ ಕಾಟ: ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು: ಪಂಚ ಗ್ಯಾರಂಟಿಗಳು ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್‌ ನ್ಯೂಸ್‌ಗಳು ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವು ತಂದೊಡ್ಡಿದ್ದು, ಇದಕ್ಕೆ ಕಡಿವಾಣ ಹಾಕಲು ಉನ್ನತ ಮಟ್ಟದಲ್ಲೇ ಚಿಂತನೆಗಳು ನಡೆಯುತ್ತಿವೆ.

ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ, ಫೋಟೋ, ವಿಡಿಯೋ ಹಂಚಿಕೊಳ್ಳುವವ ವಿರುದ್ಧ ಕಠಿಣ‌ ಕ್ರಮ ಕೈಗೊಳ್ಳಲು ಸಚಿವರ ಆಗ್ರಹದ ಬೆನ್ನಲ್ಲೇ,‌ ಸಿಎಂ‌ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.

 

ಫೇಕ್‌, ಪೋಟೋ ವಿಡಿಯೋ ಹಾವಳಿ

ಇತ್ತೀಚೆಗೆ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹಳೇ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಉಡುಪಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ಸಿಬ್ಬಂದಿ ಕಬ್ಬಡಿ ಆಟವಾಡಿದ ವಿಡಿಯೋವನ್ನು ವೈರಲ್ ಮಾಡಲಾಗಿತ್ತು.

 

ಈ ವಿಡಿಯೋದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಖಾಸಗಿ ಬಸ್ ಸಿಬ್ಬಂದಿ ಕೆಲಸ ಇಲ್ಲದೆ, ಪ್ರಯಾಣಿಕರಿಲ್ಲದೆ ಆಟವಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಉಲ್ಲೇಖ ಮಾಡಲಾಗಿತ್ತು. ಇದಷ್ಟೇ ಅಲ್ಲ, ಮಹಿಳಾ ಪ್ರಯಾಣಿಕರ ನೂಕುನುಗ್ಗಲಿನಿಂದ ಬಸ್‌ಗೆ ಹಾನಿಯಾದ ಕೆಲವು ಫೇಕ್ ಫೋಟೋಗಳನ್ನು‌ ಹಂಚಿಕೊಳ್ಳಲಾಗಿತ್ತು.

 

ಅಧಿಕಾರಿಗಳಿಗೆ ಖಡಕ್‌ ಸೂಚನೆ

ಈ ಎಲ್ಲಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದೀಗ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

 

ಗೃಹ ಸಚಿವರ ಜೊತೆಗೂ ಮಾತುಕತೆ

ಈಗಾಗಲೇ ಸಿಎಂ‌‌ ಸಿದ್ದರಾಮಯ್ಯ ಅವರು, ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ ಎಂಬ ಚರ್ಚೆ ನಡೆದಿದೆ.

ಲೋಕಸಭಾ ಚುನಾವಣಾ ದೃಷ್ಟಿಯಿಂದ ಕ್ರಮ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಫೇಕ್ ನ್ಯೂಸ್‌ಗಳಿಗೆ ಕಡಿವಾಣ ಹಾಕುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

 

ಕೈ ವಿರುದ್ಧವೂ ಕೇಳಿ ಬಂದಿದ್ದ ಫೇಕ್ ನ್ಯೂಸ್ ಆರೋಪ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವೂ ಫೇಕ್ ನ್ಯೂಸ್ ಸೃಷ್ಟಿ ಆರೋಪ ಕೇಳಿಬಂದಿತ್ತು. ಬಿಜೆಪಿಯ ಕೆಲವು ನಾಯಕರ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಫೇಕ್ ನ್ಯೂಸ್ ಸೃಷ್ಟಿ ಮಾಡಿದೆ ಎಂಬ ಆರೋಪ ಇತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ವಿರುದ್ಧವೂ ಕಾಂಗ್ರೆಸ್ ಆರೋಪ ಮಾಡಿತ್ತು. ಹಾಗಿದ್ದರೂ ವಿಧಾನಸಭೆ ಚುನಾವಣೆಯಲ್ಲಿ ಫೇಕ್ ಸುದ್ದಿಗಳು ಸಾಕಷ್ಟು ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದ್ದವು.

andolanait

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

16 mins ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

41 mins ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

2 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

3 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

3 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

5 hours ago