BREAKING NEWS

ಸಿದ್ದರಾಮಯ್ಯ ಸರ್ಕಾರಕ್ಕೆ ಫೇಕ್ ನ್ಯೂಸ್ ಕಾಟ: ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು: ಪಂಚ ಗ್ಯಾರಂಟಿಗಳು ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್‌ ನ್ಯೂಸ್‌ಗಳು ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವು ತಂದೊಡ್ಡಿದ್ದು, ಇದಕ್ಕೆ ಕಡಿವಾಣ ಹಾಕಲು ಉನ್ನತ ಮಟ್ಟದಲ್ಲೇ ಚಿಂತನೆಗಳು ನಡೆಯುತ್ತಿವೆ.

ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ, ಫೋಟೋ, ವಿಡಿಯೋ ಹಂಚಿಕೊಳ್ಳುವವ ವಿರುದ್ಧ ಕಠಿಣ‌ ಕ್ರಮ ಕೈಗೊಳ್ಳಲು ಸಚಿವರ ಆಗ್ರಹದ ಬೆನ್ನಲ್ಲೇ,‌ ಸಿಎಂ‌ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.

 

ಫೇಕ್‌, ಪೋಟೋ ವಿಡಿಯೋ ಹಾವಳಿ

ಇತ್ತೀಚೆಗೆ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹಳೇ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಉಡುಪಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ಸಿಬ್ಬಂದಿ ಕಬ್ಬಡಿ ಆಟವಾಡಿದ ವಿಡಿಯೋವನ್ನು ವೈರಲ್ ಮಾಡಲಾಗಿತ್ತು.

 

ಈ ವಿಡಿಯೋದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಖಾಸಗಿ ಬಸ್ ಸಿಬ್ಬಂದಿ ಕೆಲಸ ಇಲ್ಲದೆ, ಪ್ರಯಾಣಿಕರಿಲ್ಲದೆ ಆಟವಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಉಲ್ಲೇಖ ಮಾಡಲಾಗಿತ್ತು. ಇದಷ್ಟೇ ಅಲ್ಲ, ಮಹಿಳಾ ಪ್ರಯಾಣಿಕರ ನೂಕುನುಗ್ಗಲಿನಿಂದ ಬಸ್‌ಗೆ ಹಾನಿಯಾದ ಕೆಲವು ಫೇಕ್ ಫೋಟೋಗಳನ್ನು‌ ಹಂಚಿಕೊಳ್ಳಲಾಗಿತ್ತು.

 

ಅಧಿಕಾರಿಗಳಿಗೆ ಖಡಕ್‌ ಸೂಚನೆ

ಈ ಎಲ್ಲಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದೀಗ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

 

ಗೃಹ ಸಚಿವರ ಜೊತೆಗೂ ಮಾತುಕತೆ

ಈಗಾಗಲೇ ಸಿಎಂ‌‌ ಸಿದ್ದರಾಮಯ್ಯ ಅವರು, ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ ಎಂಬ ಚರ್ಚೆ ನಡೆದಿದೆ.

ಲೋಕಸಭಾ ಚುನಾವಣಾ ದೃಷ್ಟಿಯಿಂದ ಕ್ರಮ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಫೇಕ್ ನ್ಯೂಸ್‌ಗಳಿಗೆ ಕಡಿವಾಣ ಹಾಕುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

 

ಕೈ ವಿರುದ್ಧವೂ ಕೇಳಿ ಬಂದಿದ್ದ ಫೇಕ್ ನ್ಯೂಸ್ ಆರೋಪ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವೂ ಫೇಕ್ ನ್ಯೂಸ್ ಸೃಷ್ಟಿ ಆರೋಪ ಕೇಳಿಬಂದಿತ್ತು. ಬಿಜೆಪಿಯ ಕೆಲವು ನಾಯಕರ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಫೇಕ್ ನ್ಯೂಸ್ ಸೃಷ್ಟಿ ಮಾಡಿದೆ ಎಂಬ ಆರೋಪ ಇತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ವಿರುದ್ಧವೂ ಕಾಂಗ್ರೆಸ್ ಆರೋಪ ಮಾಡಿತ್ತು. ಹಾಗಿದ್ದರೂ ವಿಧಾನಸಭೆ ಚುನಾವಣೆಯಲ್ಲಿ ಫೇಕ್ ಸುದ್ದಿಗಳು ಸಾಕಷ್ಟು ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದ್ದವು.

andolanait

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

47 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

1 hour ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

1 hour ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

3 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

4 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

4 hours ago