BREAKING NEWS

ಬೌದ್ದ ಧರ್ಮದ ವಿದಿ ವಿಧಾನದಂತೆ ಶ್ರೀನಿವಾಸ ಪ್ರಸಾದ್‌ ಅಂತ್ಯಕ್ರಿಯೆಗೆ ಕುಟುಂಬ ನಿರ್ಧಾರ !

ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿ ವಿಧಾನದಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​.ಡಿ. ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್​ ಅವರ ಟ್ರಸ್ಟ್​ ಆವರಣದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ಪ್ರಸಾದ್ ಅವರ ಪುತ್ರಿ ಪ್ರತಿಮಾ ಪ್ರಸಾದ್​ ತಂದೆಯ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾನುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ತರಲಾಗಿದ್ದು. ಇಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಭೀಮ ಸದನದಲ್ಲಿ ಅಂತಿಮ ದರ್ಶನ: ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಸಂಸದ ಶ್ರೀನಿವಾಸ್​ ಪ್ರಸಾದ್ ಅವರ ಮನೆ ಭೀಮ ಸದನದಲ್ಲಿ ಸೋಮವಾರ ಬೆಳಗ್ಗೆ 8.30 ರಿಂದ 1 ಗಂಟೆಯವರೆಗೆ ಕುಟುಂಬಸ್ಥರ ಹಾಗೂ ಕೆಲವು ಪ್ರಮುಖ ನಾಯಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ 1 ಗಂಟೆಯಿಂದ ಮಂಗಳವಾರ 1 ಗಂಟೆಯವರೆಗೆ ಅಶೋಕ್ ಪುರಂನಲ್ಲಿರುವ NTM ಶಾಲೆಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಳಿಕ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​ಡಿ ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ.

ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗುವುದು. ನಮ್ಮ ತಂದೆ ಶ್ರೀನಿವಾಸ್ ಪ್ರಸಾದ್ ಬೌದ್ಧಧರ್ಮದ ಅನುಯಾಯಿ ಆಗಿದ್ದರು ಎಂದು ಅಂತ್ಯಕ್ರಿಯೆ ವಿಧಿ ವಿಧಾನದ ಬಗ್ಗೆ ಮಗಳು ಪ್ರತಿಮಾ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಗಣ್ಯರಿಂದ ಅಂತಿಮ ದರ್ಶನ: ಇಂದು ಅವರ ಜಯಲಕ್ಷ್ಮಿಪುರಂ ನಿವಾಸಕ್ಕೆ ಆಗಮಿಸಿ ಅವರ ಅಂತಿಮ ದರ್ಶನವನ್ನು ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಸುತ್ತೂರು ಶ್ರೀಗಳು, ಸಾಹಿತಿ ದೇವನೂರು ಮಹಾದೇವ, ಎಂಎಲ್ಸಿ ಹೆಚ್​. ವಿಶ್ವನಾಥ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

8 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

27 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

50 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago