ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿ ವಿಧಾನದಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್.ಡಿ. ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್ ಅವರ ಟ್ರಸ್ಟ್ ಆವರಣದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ಪ್ರಸಾದ್ ಅವರ ಪುತ್ರಿ ಪ್ರತಿಮಾ ಪ್ರಸಾದ್ ತಂದೆಯ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾನುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ತರಲಾಗಿದ್ದು. ಇಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಭೀಮ ಸದನದಲ್ಲಿ ಅಂತಿಮ ದರ್ಶನ: ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಮನೆ ಭೀಮ ಸದನದಲ್ಲಿ ಸೋಮವಾರ ಬೆಳಗ್ಗೆ 8.30 ರಿಂದ 1 ಗಂಟೆಯವರೆಗೆ ಕುಟುಂಬಸ್ಥರ ಹಾಗೂ ಕೆಲವು ಪ್ರಮುಖ ನಾಯಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ 1 ಗಂಟೆಯಿಂದ ಮಂಗಳವಾರ 1 ಗಂಟೆಯವರೆಗೆ ಅಶೋಕ್ ಪುರಂನಲ್ಲಿರುವ NTM ಶಾಲೆಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬಳಿಕ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್ಡಿ ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ.
ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗುವುದು. ನಮ್ಮ ತಂದೆ ಶ್ರೀನಿವಾಸ್ ಪ್ರಸಾದ್ ಬೌದ್ಧಧರ್ಮದ ಅನುಯಾಯಿ ಆಗಿದ್ದರು ಎಂದು ಅಂತ್ಯಕ್ರಿಯೆ ವಿಧಿ ವಿಧಾನದ ಬಗ್ಗೆ ಮಗಳು ಪ್ರತಿಮಾ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಗಣ್ಯರಿಂದ ಅಂತಿಮ ದರ್ಶನ: ಇಂದು ಅವರ ಜಯಲಕ್ಷ್ಮಿಪುರಂ ನಿವಾಸಕ್ಕೆ ಆಗಮಿಸಿ ಅವರ ಅಂತಿಮ ದರ್ಶನವನ್ನು ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಸುತ್ತೂರು ಶ್ರೀಗಳು, ಸಾಹಿತಿ ದೇವನೂರು ಮಹಾದೇವ, ಎಂಎಲ್ಸಿ ಹೆಚ್. ವಿಶ್ವನಾಥ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು.
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…
ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…