BREAKING NEWS

ಬೌದ್ದ ಧರ್ಮದ ವಿದಿ ವಿಧಾನದಂತೆ ಶ್ರೀನಿವಾಸ ಪ್ರಸಾದ್‌ ಅಂತ್ಯಕ್ರಿಯೆಗೆ ಕುಟುಂಬ ನಿರ್ಧಾರ !

ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿ ವಿಧಾನದಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​.ಡಿ. ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್​ ಅವರ ಟ್ರಸ್ಟ್​ ಆವರಣದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ಪ್ರಸಾದ್ ಅವರ ಪುತ್ರಿ ಪ್ರತಿಮಾ ಪ್ರಸಾದ್​ ತಂದೆಯ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾನುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ತರಲಾಗಿದ್ದು. ಇಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಭೀಮ ಸದನದಲ್ಲಿ ಅಂತಿಮ ದರ್ಶನ: ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಸಂಸದ ಶ್ರೀನಿವಾಸ್​ ಪ್ರಸಾದ್ ಅವರ ಮನೆ ಭೀಮ ಸದನದಲ್ಲಿ ಸೋಮವಾರ ಬೆಳಗ್ಗೆ 8.30 ರಿಂದ 1 ಗಂಟೆಯವರೆಗೆ ಕುಟುಂಬಸ್ಥರ ಹಾಗೂ ಕೆಲವು ಪ್ರಮುಖ ನಾಯಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ 1 ಗಂಟೆಯಿಂದ ಮಂಗಳವಾರ 1 ಗಂಟೆಯವರೆಗೆ ಅಶೋಕ್ ಪುರಂನಲ್ಲಿರುವ NTM ಶಾಲೆಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಳಿಕ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​ಡಿ ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ.

ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗುವುದು. ನಮ್ಮ ತಂದೆ ಶ್ರೀನಿವಾಸ್ ಪ್ರಸಾದ್ ಬೌದ್ಧಧರ್ಮದ ಅನುಯಾಯಿ ಆಗಿದ್ದರು ಎಂದು ಅಂತ್ಯಕ್ರಿಯೆ ವಿಧಿ ವಿಧಾನದ ಬಗ್ಗೆ ಮಗಳು ಪ್ರತಿಮಾ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಗಣ್ಯರಿಂದ ಅಂತಿಮ ದರ್ಶನ: ಇಂದು ಅವರ ಜಯಲಕ್ಷ್ಮಿಪುರಂ ನಿವಾಸಕ್ಕೆ ಆಗಮಿಸಿ ಅವರ ಅಂತಿಮ ದರ್ಶನವನ್ನು ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಸುತ್ತೂರು ಶ್ರೀಗಳು, ಸಾಹಿತಿ ದೇವನೂರು ಮಹಾದೇವ, ಎಂಎಲ್ಸಿ ಹೆಚ್​. ವಿಶ್ವನಾಥ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

17 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago