ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ, ರಾಷ್ಟ್ರಪ್ರಶಸ್ತಿ ವಿಜೇತೆ ವಾಣಿ ಜಯರಾಮ್ (78) ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕಲೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಾಣಿ ಜಯರಾಮ್ ಅವರಿಗೆ 2023ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ವಾಣಿ ಅವರು ಸಿನಿಮಾ ಹಿನ್ನೆಲೆ ಗಾಯಕಿಯಾಗಿದ್ದು, ಕನ್ನಡ, ತಮಿಳು ಹಾಗೂ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ.
ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.
ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.
ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…