BREAKING NEWS

ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ : ನೆಹರು ನೆನೆದ ಮೋದಿ

ನವದೆಹಲಿ : ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ನೆನೆದಿದ್ದಾರೆ.

ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ ಅವರ ಐತಿಹಾಸಿಕ ಎ ಟ್ರೈಸ್ಟ್ ವಿತ್ ಡೆಸ್ಟಿನಿ ಭಾಷಣದ ಪ್ರತಿಧ್ವನಿಯು ದೇಶದ ಚುನಾಯಿತ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಹಳೆಯ ಸಂಸತ್ತಿನ ಕಟ್ಟಡದ ಸುಮಾರು ಎಂಟು ದಶಕಗಳ ಪ್ರಯಾಣ ಕುರಿತು ಮಾತನಾಡಿದ್ದಾರೆ.

ಸಂಸತ್ತಿನಲ್ಲಿ ನೆಹರೂ ಮಾಡಿದ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಈ ದೇಶ ಉಳಿಯುತ್ತದೆ ಎಂದು ಹೇಳಿದ್ದೂ ಈ ಸದನದಲ್ಲೇ. ಸಂಸತ್ತಿನ ಐತಿಹಾಸಿಕ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

ರಾಜೇಂದ್ರ ಪ್ರಸಾದ್ ಅವರಿಂದ ಹಿಡಿದು ರಾಮನಾಥ್ ಕೋವಿಂದ್, ದ್ರೌಪದಿ ಮುರ್ಮು ಅವರ ವರೆಗೆ ಎಲ್ಲರ ಮಾರ್ಗದರ್ಶನವನ್ನು ಈ ಸಂಸತ್ತು ಪಡೆದುಕೊಂಡಿದೆ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಕಾಲಕ್ಕೂ ಈ ಸಂಸತ್ತು ಸಾಕ್ಷಿಯಾಗಿದೆ. ಸಂಸತ್ತಿನ ಕಲಾಪಗಳು ಈಗ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು. ಆದರೆ ಈ ಕಟ್ಟಡವು ಭವಿಷ್ಯದ ಪೀಳಿಗೆಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 15, 1947 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ. ಅಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ದೇಶದ ಮೊದಲ ಪ್ರಧಾನಿ ನೆಹರೂ,ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ ಎಂದು ಹೇಳಿದ್ದರು.

ಸಂಸತ್ತಿನ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಹಳೆ ಸಂಸತ್ತಿನಲ್ಲಿ ಮೊದಲ ದಿನದ ಅಧಿವೇಶನ ನಡೆಯಿತು. ಮಂಗಳವಾರ ಸಂಸತ್‌ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

lokesh

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

5 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

6 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

6 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

6 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

7 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

8 hours ago