BREAKING NEWS

ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ : ನೆಹರು ನೆನೆದ ಮೋದಿ

ನವದೆಹಲಿ : ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ನೆನೆದಿದ್ದಾರೆ.

ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ ಅವರ ಐತಿಹಾಸಿಕ ಎ ಟ್ರೈಸ್ಟ್ ವಿತ್ ಡೆಸ್ಟಿನಿ ಭಾಷಣದ ಪ್ರತಿಧ್ವನಿಯು ದೇಶದ ಚುನಾಯಿತ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಹಳೆಯ ಸಂಸತ್ತಿನ ಕಟ್ಟಡದ ಸುಮಾರು ಎಂಟು ದಶಕಗಳ ಪ್ರಯಾಣ ಕುರಿತು ಮಾತನಾಡಿದ್ದಾರೆ.

ಸಂಸತ್ತಿನಲ್ಲಿ ನೆಹರೂ ಮಾಡಿದ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಈ ದೇಶ ಉಳಿಯುತ್ತದೆ ಎಂದು ಹೇಳಿದ್ದೂ ಈ ಸದನದಲ್ಲೇ. ಸಂಸತ್ತಿನ ಐತಿಹಾಸಿಕ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

ರಾಜೇಂದ್ರ ಪ್ರಸಾದ್ ಅವರಿಂದ ಹಿಡಿದು ರಾಮನಾಥ್ ಕೋವಿಂದ್, ದ್ರೌಪದಿ ಮುರ್ಮು ಅವರ ವರೆಗೆ ಎಲ್ಲರ ಮಾರ್ಗದರ್ಶನವನ್ನು ಈ ಸಂಸತ್ತು ಪಡೆದುಕೊಂಡಿದೆ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಕಾಲಕ್ಕೂ ಈ ಸಂಸತ್ತು ಸಾಕ್ಷಿಯಾಗಿದೆ. ಸಂಸತ್ತಿನ ಕಲಾಪಗಳು ಈಗ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು. ಆದರೆ ಈ ಕಟ್ಟಡವು ಭವಿಷ್ಯದ ಪೀಳಿಗೆಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 15, 1947 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ. ಅಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ದೇಶದ ಮೊದಲ ಪ್ರಧಾನಿ ನೆಹರೂ,ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ ಎಂದು ಹೇಳಿದ್ದರು.

ಸಂಸತ್ತಿನ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಹಳೆ ಸಂಸತ್ತಿನಲ್ಲಿ ಮೊದಲ ದಿನದ ಅಧಿವೇಶನ ನಡೆಯಿತು. ಮಂಗಳವಾರ ಸಂಸತ್‌ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

lokesh

Recent Posts

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

28 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

3 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago