BREAKING NEWS

ರೈತರ ಆತ್ಮಹತ್ಯೆ: ಎಚ್‌ಡಿಕೆ ಆರೋಪ ಸುಳ್ಳು: ಅಂಕಿ ಅಂಶ ಬಿಡುಗಡೆ ಮಾಡಿದ ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸುಳ್ಳು. ಇದು ಅಧಿಕಾರಿಗಳು, ಪೊಲೀಸ್ ವರದಿಗಳಿಂದ ಬಂದಿರುವ ಮಾಹಿತಿ ಎಂದು ರೈತರ ಆತ್ಮಹತ್ಯೆ ಪ್ರಕರಣದ ಅಂಕಿ ಅಂಶ ಬಿಡುಗಡೆ ಮಾಡಿದರು.

ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ: ವಿಧಾನಸೌಧದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆಯೂ ಜಾಸ್ತಿ ಆಗಿದ್ದು, ಶೇಕಡಾ 80ರಷ್ಟು ಬಿತ್ತನೆ ಕಾರ್ಯ ಆಗಿದೆ. ರಸಗೊಬ್ಬರ, ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ, ಅಲ್ಲಿ ಗಲಾಟೆ ಆಗಿಲ್ಲ. ಒಬ್ಬ ರೈತನ ಸಾವಿಗೂ ಬೆಲೆ ಇದೆ, ಎಲ್ಲರ ಜೀವಕ್ಕೂ ಬೆಲೆ‌ ಇದೆ. ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ. ಪಕ್ಷಾತೀತವಾಗಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದರು.

ರೈತರ ಆತ್ಮಹತ್ಯೆ ಪ್ರಕರಣದ ಅಂಕಿ-ಅಂಶ: 2018-19ರಲ್ಲಿ 1085 ರೈತರು, 2019-20ರಲ್ಲಿ 1091 ರೈತರು, 2020-21ರಲ್ಲಿ 855 ರೈತರು, 2021-22ರಲ್ಲಿ 915 ರೈತರ ಆತ್ಮಹತ್ಯೆ ಆಗಿದೆ. 2022-23ರಲ್ಲಿ 755 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ 1ರಿಂದ ಈವರೆಗೆ 96 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ: ಎಚ್‌ಡಿಕೆ

ರೈತರ ಆತ್ಮಹತ್ಯೆ ವಿಚಾರವಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮಾತನಾಡಿದ್ದು, 5 ಅಷ್ಟೇ ಅಲ್ಲ, ಇನ್ನೂ 5 ಗ್ಯಾರಂಟಿ ಕೊಡಲಿ ನಮ್ಮ ಬೆಂಬಲವಿದೆ. ಆದರೆ ಶಿಸ್ತುಬದ್ಧವಾಗಿ ತೆಗೆದುಕೊಂಡು ಹೋಗುವ ವಾತಾವರಣ ಇಲ್ಲ. ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬಿಲ್ಲ. ನಾವಿದ್ದೇವೆ ಎನ್ನುವ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ.

ಬರೀ ಗ್ಯಾರಂಟಿಗಳ ಕಥೆ ಹೇಳಿಕೊಂಡು ಕಾಂಗ್ರೆಸ್​​ನವರು ಹೊರಟಿದ್ದಾರೆ. ಇತಿಹಾಸದಲ್ಲೇ ಆಗದ ವರ್ಗಾವಣೆ ಲೂಟಿ ಈ ಎರಡೇ ತಿಂಗಳಲ್ಲಿ ಆಗಿದೆ. ಆ‌ ಕೋಟ್ಯಂತರ ದುಡ್ಡು ವಸೂಲಿ ಜನಸಾಮಾನ್ಯರ ಮೇಲೆ ಬೀಳಲಿದೆ ಎಂದು ಹೇಳಿದರು.

andolanait

Recent Posts

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

4 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

7 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

16 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago