BREAKING NEWS

ರೈತರ ಆತ್ಮಹತ್ಯೆ: ಎಚ್‌ಡಿಕೆ ಆರೋಪ ಸುಳ್ಳು: ಅಂಕಿ ಅಂಶ ಬಿಡುಗಡೆ ಮಾಡಿದ ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸುಳ್ಳು. ಇದು ಅಧಿಕಾರಿಗಳು, ಪೊಲೀಸ್ ವರದಿಗಳಿಂದ ಬಂದಿರುವ ಮಾಹಿತಿ ಎಂದು ರೈತರ ಆತ್ಮಹತ್ಯೆ ಪ್ರಕರಣದ ಅಂಕಿ ಅಂಶ ಬಿಡುಗಡೆ ಮಾಡಿದರು.

ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ: ವಿಧಾನಸೌಧದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆಯೂ ಜಾಸ್ತಿ ಆಗಿದ್ದು, ಶೇಕಡಾ 80ರಷ್ಟು ಬಿತ್ತನೆ ಕಾರ್ಯ ಆಗಿದೆ. ರಸಗೊಬ್ಬರ, ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ, ಅಲ್ಲಿ ಗಲಾಟೆ ಆಗಿಲ್ಲ. ಒಬ್ಬ ರೈತನ ಸಾವಿಗೂ ಬೆಲೆ ಇದೆ, ಎಲ್ಲರ ಜೀವಕ್ಕೂ ಬೆಲೆ‌ ಇದೆ. ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ. ಪಕ್ಷಾತೀತವಾಗಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದರು.

ರೈತರ ಆತ್ಮಹತ್ಯೆ ಪ್ರಕರಣದ ಅಂಕಿ-ಅಂಶ: 2018-19ರಲ್ಲಿ 1085 ರೈತರು, 2019-20ರಲ್ಲಿ 1091 ರೈತರು, 2020-21ರಲ್ಲಿ 855 ರೈತರು, 2021-22ರಲ್ಲಿ 915 ರೈತರ ಆತ್ಮಹತ್ಯೆ ಆಗಿದೆ. 2022-23ರಲ್ಲಿ 755 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ 1ರಿಂದ ಈವರೆಗೆ 96 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ: ಎಚ್‌ಡಿಕೆ

ರೈತರ ಆತ್ಮಹತ್ಯೆ ವಿಚಾರವಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮಾತನಾಡಿದ್ದು, 5 ಅಷ್ಟೇ ಅಲ್ಲ, ಇನ್ನೂ 5 ಗ್ಯಾರಂಟಿ ಕೊಡಲಿ ನಮ್ಮ ಬೆಂಬಲವಿದೆ. ಆದರೆ ಶಿಸ್ತುಬದ್ಧವಾಗಿ ತೆಗೆದುಕೊಂಡು ಹೋಗುವ ವಾತಾವರಣ ಇಲ್ಲ. ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬಿಲ್ಲ. ನಾವಿದ್ದೇವೆ ಎನ್ನುವ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ.

ಬರೀ ಗ್ಯಾರಂಟಿಗಳ ಕಥೆ ಹೇಳಿಕೊಂಡು ಕಾಂಗ್ರೆಸ್​​ನವರು ಹೊರಟಿದ್ದಾರೆ. ಇತಿಹಾಸದಲ್ಲೇ ಆಗದ ವರ್ಗಾವಣೆ ಲೂಟಿ ಈ ಎರಡೇ ತಿಂಗಳಲ್ಲಿ ಆಗಿದೆ. ಆ‌ ಕೋಟ್ಯಂತರ ದುಡ್ಡು ವಸೂಲಿ ಜನಸಾಮಾನ್ಯರ ಮೇಲೆ ಬೀಳಲಿದೆ ಎಂದು ಹೇಳಿದರು.

andolanait

Recent Posts

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

8 mins ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

11 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

14 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

15 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

15 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

16 hours ago