BREAKING NEWS

ರೈತರ ಆತ್ಮಹತ್ಯೆ: ಎಚ್‌ಡಿಕೆ ಆರೋಪ ಸುಳ್ಳು: ಅಂಕಿ ಅಂಶ ಬಿಡುಗಡೆ ಮಾಡಿದ ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸುಳ್ಳು. ಇದು ಅಧಿಕಾರಿಗಳು, ಪೊಲೀಸ್ ವರದಿಗಳಿಂದ ಬಂದಿರುವ ಮಾಹಿತಿ ಎಂದು ರೈತರ ಆತ್ಮಹತ್ಯೆ ಪ್ರಕರಣದ ಅಂಕಿ ಅಂಶ ಬಿಡುಗಡೆ ಮಾಡಿದರು.

ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ: ವಿಧಾನಸೌಧದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆಯೂ ಜಾಸ್ತಿ ಆಗಿದ್ದು, ಶೇಕಡಾ 80ರಷ್ಟು ಬಿತ್ತನೆ ಕಾರ್ಯ ಆಗಿದೆ. ರಸಗೊಬ್ಬರ, ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ, ಅಲ್ಲಿ ಗಲಾಟೆ ಆಗಿಲ್ಲ. ಒಬ್ಬ ರೈತನ ಸಾವಿಗೂ ಬೆಲೆ ಇದೆ, ಎಲ್ಲರ ಜೀವಕ್ಕೂ ಬೆಲೆ‌ ಇದೆ. ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ. ಪಕ್ಷಾತೀತವಾಗಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದರು.

ರೈತರ ಆತ್ಮಹತ್ಯೆ ಪ್ರಕರಣದ ಅಂಕಿ-ಅಂಶ: 2018-19ರಲ್ಲಿ 1085 ರೈತರು, 2019-20ರಲ್ಲಿ 1091 ರೈತರು, 2020-21ರಲ್ಲಿ 855 ರೈತರು, 2021-22ರಲ್ಲಿ 915 ರೈತರ ಆತ್ಮಹತ್ಯೆ ಆಗಿದೆ. 2022-23ರಲ್ಲಿ 755 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ 1ರಿಂದ ಈವರೆಗೆ 96 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ: ಎಚ್‌ಡಿಕೆ

ರೈತರ ಆತ್ಮಹತ್ಯೆ ವಿಚಾರವಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮಾತನಾಡಿದ್ದು, 5 ಅಷ್ಟೇ ಅಲ್ಲ, ಇನ್ನೂ 5 ಗ್ಯಾರಂಟಿ ಕೊಡಲಿ ನಮ್ಮ ಬೆಂಬಲವಿದೆ. ಆದರೆ ಶಿಸ್ತುಬದ್ಧವಾಗಿ ತೆಗೆದುಕೊಂಡು ಹೋಗುವ ವಾತಾವರಣ ಇಲ್ಲ. ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬಿಲ್ಲ. ನಾವಿದ್ದೇವೆ ಎನ್ನುವ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ.

ಬರೀ ಗ್ಯಾರಂಟಿಗಳ ಕಥೆ ಹೇಳಿಕೊಂಡು ಕಾಂಗ್ರೆಸ್​​ನವರು ಹೊರಟಿದ್ದಾರೆ. ಇತಿಹಾಸದಲ್ಲೇ ಆಗದ ವರ್ಗಾವಣೆ ಲೂಟಿ ಈ ಎರಡೇ ತಿಂಗಳಲ್ಲಿ ಆಗಿದೆ. ಆ‌ ಕೋಟ್ಯಂತರ ದುಡ್ಡು ವಸೂಲಿ ಜನಸಾಮಾನ್ಯರ ಮೇಲೆ ಬೀಳಲಿದೆ ಎಂದು ಹೇಳಿದರು.

andolanait

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

3 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

3 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

7 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

7 hours ago